ಬೆಂಗಳೂರು, ಏಪ್ರಿಲ್ 29: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು ಎಂದು ಹೇಳಿದ್ದಾರೆ.
ನಾವು ಎಲ್ಲಿ ವಾಸಿಸುತ್ತೇವೆಯೋ ಆ ರಾಜ್ಯದ ಭಾಷೆಯನ್ನು ಕಲಿಯಬೇಕು ಎಂದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮರಾಠಿ ಕಲಿಯಬೇಕು, ಕರ್ನಾಟಕದಲ್ಲಿರುವ ಮರಾಠಿಗರು ಕನ್ನಡ ಕಲಿಯಬೇಕು. ಭಾಷೆ ಎಂಬುದು ಮನುಷ್ಯರನ್ನು ಬೆಸೆಯುವ ಸೇತುವೆಯಾಗಬೇಕೇ ಹೊರತು ಗೋಡೆಯಾಗಬಾರದು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ