ಬೀದರ್, (ಮೇ 18): ಮಧ್ಯಪ್ರಾಚ್ಯ ಯುದ್ಧದ (War) ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ವಿನಿಮಮ ಕೊರತೆ ಸೇರಿದಂತೆ ಹಲವು ಆರ್ಥಿಕ ಸಂಕಷ್ಟಗಳು ಎದುರಾಗಿದೆ. ಪರಿಣಾಮ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ (Petrol, Diesel Price Hike). ಇದರ ಬೆನ್ನಲ್ಲೇ ಅಗತ್ಯ ವಸ್ತಗಳು ಬೆಲೆ ಹೆಚ್ಚಳವಾಗುತ್ತಿದೆ. ಹೌದು…ಈಗಾಗಲೇ ಖಾಸಗಿ ಬಸ್, ಸ್ಕೂಲ್ ಬಸ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಯಾಗುತ್ತಿದ್ದು, ಇದೀಗ ತೈಲ ಬೆಲೆ ಏರಿಕೆ ಬಿಸಿ ಅನ್ನದಾತರಿಗೂ ತಟ್ಟಿದೆ. ಯಂತ್ರೋಪಕರಣಗಳಿಂದ ಕೃಷಿ ಚಟುವಟಿಕೆ ಮಾಡುತ್ತಿದ್ದ ರೈತರಿಗೆ ತೈಲ ಬೆಲೆ ಬಿಸಿ ತಟ್ಟಿದ್ದು, ರೈತರು ಬಿತ್ತನೆ ಹೊಲ ಹದಗೊಳಿಸುವ ಯಂತ್ರದ ಬಾಡಿಕೆ ದರ ಹೆಚ್ಚಳವಾಗಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗೆ ಎತ್ತುಗಳನ್ನ ಖರೀದಿಸಲು ಮುಂದಾಗಿದ್ದಾರೆ. ಎತ್ತು ಖರೀದಿಸಲು ತೆಲಂಗಾಣ ಮಹಾರಾಷ್ಟ್ರ ಬೀದರ್ ನಿಂದ ಔರಾದ್ ನ APMC ಜಾನುವಾರು ಮಾರುಕಟ್ಟೆ ಬರುತ್ತಿದ್ದು, ಒಂದು ಜೋಡಿ ಎತ್ತು ಒಂದೂವರೆ ಲಕ್ಷದಿಂದ ನಾಲ್ಕು ಲಕ್ಷ ರೂ, ವರೆಗೆ ಮಾರಾಟವಾಗುತ್ತಿವೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.