ಯುವತಿಗೆ ಕಾಲ್ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್
ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
“ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಮಚ್ಚೆ ಇದ್ದರೆ ಪೂಜೆಗೆ ಕುಳಿತುಕೊಳ್ಳಲು ಆಗುವುದಿಲ್ಲ” ಎಂದು ಹೇಳಿ ಆಕೆಗೆ ಫೋಟೋ ಕಳುಹಿಸುವಂತೆ ಪೀಡಿಸಿದ್ದಾನೆ. ಅಷ್ಟೇ ಅಲ್ಲದೆ, ಇತರ ಕೆಲವು ಯುವತಿಯರ ಫೋಟೋಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿ ನಂಬಿಸಲು ಯತ್ನಿಸಿದ್ದಾನೆ.
ಏಪ್ರಿಲ್ 12ರಂದು ಈ ಕರೆ ಬಂದಿದ್ದು, ಇದರಿಂದ ರೋಸಿಹೋದ ಚೈತ್ರಾ ಮತ್ತು ಅವರ ಕುಟುಂಬಸ್ಥರು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತ ಪರಾರಿಯಾಗಿದ್ದಾನೆ.ಮಾಟ-ಮಂತ್ರದ ಹೆಸರಿನಲ್ಲಿ ಯುವತಿಯರನ್ನು ದುರ್ಬಳಕೆ ಮಾಡಿಕೊಳ್ಳುವ ಜಾಲದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ