ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು ದೂರ ಮಾಡುತ್ತದೆ’ ಎಂದು ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್​​ಗೆ ತಿಳಿಸಿದ್ದಾಗಿ ಬಾರ್ ಆ್ಯಂಡ್ ಬೇಂಚ್ ವರದಿ ಮಾಡಿದೆ.

‘ನಾನು ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದೇನೆ ಮತ್ತು ಆ ಅಫಿಡವಿಟ್‌ನಲ್ಲಿ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದೇನೆ. ದೈವಾರಾಧಕರನ್ನು ನೋಯಿಸಿದ್ದೇನೆ ಎಂದು ಮಿಮಿಕ್ರಿ ಮಾಡಿದಾಗ ನನಗೆ ತಿಳಿದಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು. ನನಗೆ ಈ ಸೂಕ್ಷ್ಮತೆಗಳ ಬಗ್ಗೆ ತಿಳಿದಿರಲಿಲ್ಲ’ ಎಂದು ರಣವೀರ್ ಸಿಂಗ್ ಕೋರ್ಟ್​​ಗೇ ಈ ಮೊದಲು ವಕೀಲರ ಮೂಲಕ ತಿಳಿಸಿದ್ದರು.

‘ಈ ಅಫಿಡವಿಟ್ ಮೂಲಕ ನಾನು ಮತ್ತೊಮ್ಮೆ ನನ್ನ ವಿಷಾದ ಹೊರಹಾಕುತ್ತೇನೆ. ಬೇಷರತ್ತ ಕ್ಷಮೆಯಾಚಿಸುತ್ತೇನೆ . ನನ್ನ ಪ್ರಾರ್ಥನೆಗಳನ್ನು ಸಲ್ಲಿಸಲು ಮತ್ತು ನನ್ನ ಭಕ್ತಿಯನ್ನು ವ್ಯಕ್ತಪಡಿಸಲು ನಾನು ಶೀಘ್ರವೇ ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ’ ಎಂದು ರಣವೀರ್ ಸಿಂಗ್ ಅಫಿಡವಿಟ್​​ನಲ್ಲಿ ತಿಳಿಸಿರುವುದಾಗಿ ಪೂವಯ್ಯ ಹೇಳಿದ್ದರು.

ಇದನ್ನೂ ಓದಿ: ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

ಆದರೆ, ದೂರುದಾರ ಪ್ರಶಾಂತ್ ಮೇಥಲ್​​ಗೆ ಇದು ಖುಷಿ ಕೊಟ್ಟಿರಲಿಲ್ಲ. ರಣವೀರ್ ಕ್ಷಮೆಯಲ್ಲಿ ಪ್ರಾಮಾಣಿಕತೆ ಕಾಣಿಸಿಲ್ಲ ಎಂದಿದ್ದರು. ಇದಕ್ಕೆ ಉತ್ತರಿಸಿರೋ ಪೂವಯ್ಯ ಅವರು, ಪ್ರಶಾಂತ್ ಅವರ ಜೊತೆ ಚರ್ಚಿಸಿ, ಹೊಸ ಅಫಿಡವಿಟ್ ಸಿದ್ಧ ಮಾಡಿ ಸಲ್ಲಿಕೆ ಮಾಡೋದಾಗಿ ಹೇಳಿದ್ದಾರೆ. ಪ್ರಕರಣವನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ.
ರಣವೀರ್ ಸಿಂಗ್ ಅವರು ಗೋವಾದಲ್ಲಿ ನಡೆದ ಫಿಲ್ಮ್​ ಫೆಸ್ಟಿವಲ್​​ನಲ್ಲಿ ದೈವವನ್ನು ಅನುಕರಿಸಿದ್ದರು. ರಿಷಬ್ ಎದುರು ಅವರು ಈ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *