Headlines

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಜಡ್ಜ್​ ಮೊಹಮ್ಮದ್ ರೋಷನ್ ಶಾ ತಾಕೀತು ಮಾಡಿದ್ದಾರೆ.

Source link

Leave a Reply

Your email address will not be published. Required fields are marked *