ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ! – Kannada News | Hassan Rains Trigger Sakleshpur Landslide: Railway Tracks Blocked, Trains Halted

ಹಾಸನ, ಆಗಸ್ಟ್​​ 02: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸಕಲೇಶಪುರ ತಾಲೂಕಿನ ಯಡಕುಮಾರಿ ಟು ಶಿರವಾಗಿಲು ನಡುವಿನ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿರುವಂತಹ ಘಟನೆ ನಡೆದಿದೆ. ರೈಲ್ವೆ ಹಳಿ ಪಕ್ಕದಲ್ಲಿ ಮೇಲಿನಿಂದ‌ ನೀರು ಬೀಳುತ್ತಿದ್ದು, ಇಡೀ ಸ್ಥಳ ಸಂಪೂರ್ಣ ಕೆಸರುಮಯವಾಗಿದೆ. ಧಾರಾಕಾರ ಮಳೆ ನಡುವೆಯೂ ರೈಲ್ವೆ ಸಿಬ್ಬಂದಿ ಹಿಟಾಚಿ ಯಂತ್ರಗಳ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ನಡೆಸಿದ್ದಾರೆ. ಇದೇ ರೀತಿ ಮಳೆ ಮುಂದುವರಿದರೆ ಮತ್ತೆ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೆರವು ಕಾರ್ಯ ಮುಗಿಯುವವರೆಗೆ ಈ ಮಾರ್ಗದಲ್ಲಿ ರೈಲುಗಳ ಓಡಾಟವನ್ನು ರೈಲ್ವೆ ಇಲಾಖೆ ಸಂಪೂರ್ಣವಾಗಿ ಬಂದ್ ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *