ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಾಸ್ಯನಟ ಸುನಿಲ್ ಕರ್ನಾಟಕಕ್ಕೆ ಬಂದಿದ್ದಾರೆ. ಕನ್ನಡದ ‘ಜೋಡೆತ್ತು’ ಸಿನಿಮಾನಲ್ಲಿ ಸುನಿಲ್ ಅವರು ಚಿಕ್ಕಣ್ಣ ಅವರೊಟ್ಟಿಗೆ ಸೇರಿ ನಟಿಸುತ್ತಿದ್ದಾರೆ. ಮೈಸೂರಿನ ಹೊರವಲಯದಲ್ಲಿ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಸುನಿಲ್ ಅವರು ಸ್ಥಳೀಯ ಪುರಾತನ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿದ್ದ ಸುನಿಲ್, ಇದೀಗ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ