Headlines

ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು? – Kannada News | Tragedy at Nandi Hills Monsoon Marathon: 31 Year Old Bengaluru Man Collapses and Dies

ದುರಂತ ಅಂತ್ಯಕಂಡ ಕ್ರೀಡಾಪಟುImage Credit source: Tv9 Kannada

ಚಿಕ್ಕಬಳ್ಳಾಪುರ, ಆಗಸ್ಟ್​ 09: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ಕ್ರೀಡಾಪಟು ಓರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಮನ್ ದೀಪ್ ಸಿಂಗ್ ಜಗಡೆ(31) ಮೃತ ದುರ್ದೈವಿಯಾಗಿದ್ದು, ಹೃದಯಾಘಾತದಿಂದ ಅಸುನೀಗರುವ ಸಾಧ್ಯತೆ ಅಂದಾಜಿಸಲಾಗಿದೆ. 21 ಕಿಲೋಮೀಟರ್‌ ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದ ಅಮನ್​, ನಂದಿಗಿರಿಧಾಮದ ಬೆಟ್ಟದ ಮೇಲೆ ಕುಸಿದುಬಿದ್ದಿದ್ದಾರೆ. ತಕ್ಷಣ ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಿಲ್ಲ. ಅಮನ್ ದೀಪ್ ಸಿಂಗ್ ಪಂಜಾಬ್​​ ಮೂಲದವರಾಗಿದ್ದು, ಬೆಂಗಳೂರಲ್ಲಿ ನೆಲೆಸಿದ್ದರು. ಮಾನ್ಯತಾ ಟೆಕ್​ ಪಾರ್ಕ್​ನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.

ದೇವರು ಜೊತೆಗಿದ್ದಾನೆ ಎಂದು ಬರೆದುಕೊಂಡಿದ್ದ ಅಮನ್ ದೀಪ್

ಅಮನ್ ದೀಪ್ ಸಿಂಗ್, 21 ಕೀಲೊ ಮೀಟರ್ ಕ್ರಮಿಸಬೇಕಿದ್ದ ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​​ನ ಅರ್ಧದಷ್ಟು ಮಾತ್ರ ಓಡಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿರುವ ಮೃತನ ಪತ್ನಿ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದು, ಮೃತದೇಹ ಸದ್ಯ ಆಸ್ಪತ್ರೆಯಲ್ಲಿಯೇ ಇದೆ. ಇನ್ನು ಮ್ಯಾರಥಾನ್​​ ಸಂಬಂಧ ಇನ್ಸ್ಟಾಗ್ರಾಮ್​​ ಪೋಸ್ಟ್​​ ಮಾಡಿದ್ದ ಅಮನ್ ದೀಪ್ ಸಿಂಗ್ 21 ಕೀಲೋ ಮೀಟರ್ ರನ್ನಿಂಗ್​​ನಲ್ಲಿ ದೇವರು ಜೊತೆಗಿದ್ದಾನೆ ಎಂದು ಬರೆದುಕೊಂಡಿದ್ದರು ಎಂಬುದೂ ಗೊತ್ತಾಗಿದೆ.

ಇದನ್ನೂ ಓದಿ: ನೀವು ಭಯೋತ್ಪಾದಕರಾ ಎಂದು ಪ್ರಶ್ನಿಸಿ ಟೆಕ್ಕಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

4,500ಕ್ಕೂ ಹೆಚ್ಚುಮಂದಿ ಭಾಗಿ

10 ಕಿಲೋಮೀಟರ್ ಹಾಗೂ 21 ಕಿಲೋಮೀಟರ್ ವಿಭಾಗಗಳಲ್ಲಿ ಈ ಮ್ಯಾರಥಾನ್‌ ನಡೆದಿದ್ದು, 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಕರ್ನಾಟಕ ಸರ್ಕಾರ, ಯುವಜನ ಕ್ರೀಡಾ ಮತ್ತು ಸೇವಾ ಇಲಾಖೆ ಹಾಗೂ ಜಿಲ್ಲಾಡಳಿತ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *