ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.