ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿವೇದಿತಾ ಗೌಡ, ಕಿಶನ್ ಬಿಳಗಲಿ ಅವರಿಂದ ಗಂಭೀರವಾದ ಕಾನೂನು ಉಲ್ಲಂಘನೆ ಆಗಿದೆ. ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಗೆ ದೂರು ನೀಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ನವಿಲುಗಳನ್ನು ಎಲ್ಲಿ ಕೊಲ್ಲಲಾಗಿದೆ? ಯಾವ ಅಂಗಡಿಯಲ್ಲಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಅಂತ ದೂರು ನೀಡಿದ್ದೇನೆ. ದೂರು ನೀಡಿ ಇಷ್ಟು ದಿನ ಕಳೆದರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ದಿನೇಶ್ ಕಲ್ಲಹಳ್ಳಿ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
