ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಸಿದ್ದರಾಮಯ್ಯನವರ ರಾಜೀನಾಮೆಯನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೇಶಪಾಂಡೆ. ನಾಳೆ ರಾಜೀನಾಮೆ ಕೊಡ್ತೀನಿ ಎಂದು ಸಿಎಂ ಹೇಳಿದ್ದು, ನಾವು ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ನಾಳೆ (ಮೇ 28) ರಾಜೀನಾಮೆಯನ್ನು ಖಚಿತಪಡಿಸಿದರು.