ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ