ನಿತ್ಯಾಗೆ ಗೊತ್ತಾಯ್ತ ಪ್ರೀತಿಯ ಸತ್ಯ; ಕರ್ಣ-ನಿಧಿ ವಿವಾಹ ಮಾಡಿಸಲು ಮುಂದಾದ ಸಹೋದರಿ – Kannada News | Karna Kannada Serial: Nithya’s Shocking Decision for Karna Nidhi Wedding**

‘ಕರ್ಣ’ ಧಾರಾವಾಹಿಯಲ್ಲಿ ಒಂದು ಪ್ರಮುಖ ಬೆಳವಣಿಗೆ ನಡೆದಿದೆ. ಇಷ್ಟು ದಿನ ಮುಚ್ಚಿಟ್ಟ ಸತ್ಯವು ಹೊರ ಬೀಳುವ ಸಮಯ ಬಂದಿದೆ. ಕರ್ಣ ಹಾಗೂ ನಿಧಿ ಪರಸ್ಪರ ಪ್ರೀತಿಸುತ್ತಾ ಇದ್ದವರು. ಆದರೆ, ಕರ್ಣನ ತಂದೆ ಮಾಡಿದ ಮೋಸದಿಂದ ಒಂದು ದೊಡ್ಡ ಆಘಾತ ಉಂಟಾಗಿತ್ತು. ಕರ್ಣನು ನಿತ್ಯಾಳನ್ನು ಮದುವೆ ಆಗುವ ಅನಿವಾರ್ಯತೆ ಬಂತು. ಈಗ ಆ ತಪ್ಪನ್ನು ಸರಿ ಮಾಡುವ ಸಮಯ ಎಂದೇ ಹೇಳಬಹುದು. ಧಾರಾವಾಹಿಯಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ನಿಧಿ ಹಾಗೂ ಕರ್ಣ ಪ್ರೀತಿ ಮಾಡುತ್ತಿದ್ದರು. ಆದರೆ, ಕರ್ಣ ಹಾಗೂ ನಿತ್ಯಾ ವಿವಾಹ ನಡೆದಿದೆ. ಈ ವಿವಾಹದ ಬಳಿಕ ನಿಧಿಗೆ ಸಾಕಷ್ಟು ಬೇಸರ ಆಯಿತು. ಮುಂದೇನು ಮಾಡಬೇಕು ಎಂಬ ಚಿಂತೆ ಆಕೆಗೆ ಬಂದಿತ್ತು. ಕೊನೆಗೆ ಕರ್ಣನು ಮುಂದಿನ ದಿನಗಳಲ್ಲಿ ಅವಳನ್ನು ಮದುವೆ ಆಗುವ ಭರವಸೆ ನೀಡಿದನು. ಈಗ ಆ ಸಮಯ ಬಂದಿದೆ.

ಕರ್ಣನು ಮತ್ತೊಂದು ಕುತಂತ್ರ ಮಾಡಿದ್ದಾನೆ. ಈ ಕುತಂತ್ರ ಸಣ್ಣದಲ್ಲ. ಅದು ದೊಡ್ಡ ಕತಂತ್ರವೇ. ನಿಧಿಗೆ ಬೇರೆ ಮದುವೆ ಮಾಡಬೇಕು ಎಂದು ಆತ ನಿರ್ಧರಿಸಿದೆ. ಈ ಬೆನ್ನಲ್ಲೇ ಅರ್ಜುನ್​​ನ (ಗಗನ್ ಚಿನ್ನಪ್ಪ) ಕರೆ ತಂದನು. ಇಬ್ಬರೂ ಮದುವೆ ಮಾಡಬೇಕು ಎಂಬ ಪ್ರಯತ್ನ ನಡೆಯಿತು. ಇದನ್ನು ಈಗ ನಿಧಿಯೇ ಬದಲಿಸುವ ಸಮಯ ಬಂದಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಕರ್ಣ-ನಿಧಿ ಮದುವೆ ಮಾಡಿಸ್ತಾಳೆ ನಿತ್ಯಾ

ಕರ್ಣ ಧಾರಾವಾಹಿಯಲ್ಲಿ ಈಗ ನಿತ್ಯಾಗೆ ಸತ್ಯ ಗೊತ್ತಾಗಿದೆ. ಆಕೆ ನಿಧಿ ಹಾಗೂ ಕರ್ಣನ ಮದುವೆ ಮಾಡಿಸಲು ಮುಂದಾಗಿದ್ದಾಳೆ. ಈ ನಿರ್ಧಾರ ಮನೆಯವರಿಗೆ ಶಾಕಿಂಗ್ ಎನಿಸಿದೆ. ಈ ಮೊದಲೇ ಹೇಳಿದಂತೆ ನಿತ್ಯಾ ಹಾಗೂ ಕರ್ಣ ಮದುವೆ ನಡೆದೇ ಇಲ್ಲ. ಹೀಗಾಗಿ, ನಿಧಿ ಹಾಗೂ ಕರ್ಣನ ಮದುವೆ ಆಗಲು ಯಾವುದೇ ತೊಂದರೆ ಇಲ್ಲ. ಮತ್ತೊಂದು ವಿಷಯ ಎಂದರೆ ಕರ್ಣ ಹಾಗೂ ನಿತ್ಯಾ ಇನ್ನುಮುಂದೆ ಫ್ರೆಂಡ್ಸ್ ಆಗಿರಲು ನಿರ್ಧರಿಸಿದ್ದಾರೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *