ಕೊಪ್ಪಳ, ಜೂನ್ 29: ಶಿಕ್ಷಣ ನೀಡಿ ಭವಿಷ್ಯ ರೂಪಿಸಿದ ತಮ್ಮ ನೆಚ್ಚಿನ ಗುರುವಿಗೆ ಹಳೆಯ ವಿದ್ಯಾರ್ಥಿಗಳು ಅಪೂರ್ವ ‘ಗುರು ಕಾಣಿಕೆ’ ನೀಡಿದ ಹೃದಯಸ್ಪರ್ಶಿ ಘಟನೆ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಜೆ.ಎಂ. ನದಾಫ್ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕರ ನಿವೃತ್ತಿ ಸನ್ಮಾನದ ನೆನಪಿಗಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ, ಪ್ರೀತಿಯಿಂದ ಹೊಸ ಬೈಕ್ ಒಂದನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಗುರುಭಕ್ತಿಯನ್ನು ತೋರಿಸಿದ್ದಾರೆ. ವಿದ್ಯಾರ್ಥಿಗಳ ಈ ಅಪೂರ್ವ ಕೊಡುಗೆಗೆ ಶಿಕ್ಷಕರು ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
