ನೀಟ್ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ – Kannada News | NEET Leak: Pradhan Resigns; Amit Shah Vows Reforms for Student Welfare

ನವದೆಹಲಿ, ಜುಲೈ 26: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಾರಗಟ್ಟಲೆ ನಡೆದ ಪ್ರತಿಭಟನೆಗಳು ಮತ್ತು ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವಕ್ಕಾಗಿ ಬಂದ ಒತ್ತಡದ ಹಿನ್ನೆಲೆಯಲ್ಲಿ ಪ್ರಧಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರಿಗೆ ಯಾವುದೇ ರಾಜಕೀಯ ಹುದ್ದೆಗಿಂತ ದೇಶ, ಯುವಕರು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ಬಿಜೆಪಿಯ ಈ ತತ್ವ ಮತ್ತು ಬದ್ಧತೆಯನ್ನು ಎತ್ತಿಹಿಡಿದಿದೆ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುತ್ತದೆ ಮತ್ತು ಭವಿಷ್ಯದಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಸುಧಾರಣೆಗಳನ್ನು ತರಲಿದೆ ಎಂದು ಭರವಸೆ ನೀಡಿದ್ದಾರೆ.

ಸಚಿವರ ರಾಜೀನಾಮೆ, ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕಾನೂನು ಕ್ರಮಗಳನ್ನು ಹಿಂಪಡೆಯುವ ಭರವಸೆಯನ್ನು ಸರ್ಕಾರ ನೀಡಿದ ನಂತರ ಜಿರಳೆ ಜನತಾ ಪಕ್ಷವು ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದೆ.

ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ, ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಅನುಷ್ಠಾನ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳ ವಿಸ್ತರಣೆ, ಪಿಎಂ ಶ್ರೀ ಶಾಲೆಗಳ ಬಲವರ್ಧನೆ ಮತ್ತು ಕೌಶಲ್ಯ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ.

ಮತ್ತಷ್ಟು ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಲ್ಹಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ರಾಜೀನಾಮೆ ಕುರಿತು ‘ಎಕ್ಸ್’ (ಟ್ವಿಟರ್)ನಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್, “ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ. ಕಳೆದ ಕೆಲವು ದಿನಗಳ ಬೆಳವಣಿಗೆಗಳು ನನಗೆ ತೀವ್ರ ಬೇಸರ ತಂದಿವೆ. ದೇಶದ ಯುವಶಕ್ತಿಯು ಗೊಂದಲದ ಜಾಲದಲ್ಲಿ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಜಂತರ್ ಮಂತರ್ ಪ್ರತಿಭಟನೆಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು, ದೇಶದ ಏಕತೆ ಕಾಪಾಡಬೇಕು ಮತ್ತು ವಿದ್ಯಾರ್ಥಿಗಳ ಭವಿಷ್ಯ ಕಾನೂನು ಸಂಕಷ್ಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ತಕ್ಷಣವೇ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿ, ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21 ರಂದು ಮರುಪರೀಕ್ಷೆ ನಡೆಸಿ ಜುಲೈ 16 ರಂದು ಫಲಿತಾಂಶವನ್ನೂ ಪ್ರಕಟಿಸಿತ್ತು ಎಂದು ಅವರು ತಮ್ಮ ಪತ್ರದಲ್ಲಿ ಸ್ಮರಿಸಿದ್ದಾರೆ. ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.

ಸಚಿವರ ರಾಜೀನಾಮೆ, ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕಾನೂನು ಕ್ರಮಗಳನ್ನು ಹಿಂಪಡೆಯುವ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದೆ.

ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ, ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಪರಿಣಾಮಕಾರಿ ಅನುಷ್ಠಾನ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳ ವಿಸ್ತರಣೆ, ಪಿಎಂ ಶ್ರೀ ಶಾಲೆಗಳ ಬಲವರ್ಧನೆ, ಡಿಜಿಟಲ್ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ನೀಡಿರುವ ಪ್ರಮುಖ ಕೊಡುಗೆಯನ್ನು ಸ್ಮರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:23 am, Sun, 26 July 26

Source link

Leave a Reply

Your email address will not be published. Required fields are marked *