ಬಾಗಲಕೋಟೆ, (ಜೂನ್ 21): ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.
