Headlines

ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು? – Kannada News | What Advice Did Mallikarjun Kharge Give BK Hariprasad After He Took Charge as KPCC President

ಬೆಂಗಳೂರು, ಜೂನ್​​ 21: ರಾಜ್ಯ ಕಾಂಗ್ರೆಸ್​ಗೆ ಇಂದು ಮಹತ್ವದ ದಿನ. ಆರೂವರೆ ವರ್ಷ KPCC ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್​ ಚುಕ್ಕಾಣಿ ಹಿಡಿದಿದ್ದಾರೆ. ಡಿಕೆ ಶಿವಕುಮಾರ್​ ಸಿಎಂ ಆದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಬಿ.ಕೆ. ಹರಿಪ್ರಸಾದ್ ಪಕ್ಷಕ್ಕೆ ಹೊಸಬರೇನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ, ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಂದಿದ್ದಾರೆ. ತಳಮಟ್ಟದಿಂದ ಬಂದ ಕಾರ್ಯಕರ್ತನನ್ನು ಕೆಪಿಸಿಸಿ ಅಧ್ಯಕ್ಷ ಮಾಡಿದ್ದೇವೆ. ಪಕ್ಷ ತತ್ವಗಳನ್ನು ಮೈಗೂಡಿಸಿಕೊಂಡವರಿಗೆ ಅಧಿಕಾರ ನೀಡಿದ್ದೇವೆ ಎಂದರು. ನಮ್ಮ ಮುಂದೆ ಅನೇಕ ದೊಡ್ಡ ಸಮಸ್ಯೆಗಳಿವೆ. ಅಗತ್ಯವಸ್ತುಗಳ ದರ ಏರಿಕೆ, ಹಣದುಬ್ಬರ ಸಮಸ್ಯೆಯಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಪಠ್ಯ ಪುಸ್ತಕದ ದರ ಏರಿಕೆಯಾಗಿದೆ. ಬೆಲೆ ಏರಿಕೆ ವಿರುದ್ಧ ಹೋರಾಟದ ಹೊಣೆ ಬಿ.ಕೆ.ಹರಿಪ್ರಸಾದ್ ಮೇಲಿದೆ. ಬಿ.ಕೆ.ಹರಿಪ್ರಸಾದ್ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

Leave a Reply

Your email address will not be published. Required fields are marked *