ಬೆಂಗಳೂರು, ಆಗಸ್ಟ್ 06: ಕರ್ನಾಟಕದಲ್ಲಿ ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಇಂದು ಖಾತೆ ಹಂಚಿಕೆ ಆಗುವ ಸಾಧ್ಯತೆ ಇದೆ. ಇಂದು ರಾತ್ರಿಯೊಳಗೆ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ನಿರೀಕ್ಷೆಯಿದೆ.ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಹೀಗಿದ್ದರೂ ಮತ್ತೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ನಿರ್ಧಾರವಾಗಲಿದೆ. ನೂತನ ಸಚಿವರಿಗೆ ಖಾತೆ ಹಂಚಿದರೂ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇರುವ ಕಾರಣ ಹೀಗಾಗಿ ಯಾವುದೇ ಖಾತೆ ನೀಡಿದರೂ ಕಾರ್ಯ ನಿರ್ವಹಿಸುವಂತೆ ನೂತನ ಸಚಿವರಿಗೆ ಹೈಕಮಾಂಡ್ ನಾಯಕರು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
