Headlines

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ? – Kannada News | Karnataka Cabinet Portfolios Allocated: DK Shivakumar Assigns Departments to New Ministers Ahead of Monsoon Session

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಆಗಸ್ಟ್​​ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್​​ ಹೈಕಮಾಂಡ್​​, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದರೋದು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಅಧಿವೇಶನ ಆರಂಭದ ಮುನ್ನಾ ದಿನವೇ ನೂತನ ಸಚಿವರಿಗೆ ಇಲಾಖಾವಾರು ಜವಾಬ್ದಾರಿ ಹಂಚಿಕೆ ನಡೆದಿದೆ.

ಯಾರಿಗೆ ಯಾವ ಖಾತೆ?

  • ಎನ್​.ಚಲುವರಾಯಸ್ವಾಮಿ-ಕೃಷಿ ಇಲಾಖೆ
  • ರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಸರಬರಾಜು ವ್ಯವಹಾರ
  • ಕೆ.ಹೆಚ್​.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ
  • ಸಂತೋಷ್ ಲಾಡ್-ಕಾರ್ಮಿಕ ಇಲಾಖೆ
  • ಕೆ.ಎಸ್.ಬಸವಂತಪ್ಪ- ಮೀನುಗಾರಿಕೆ, ಬಂದರು ಮತ್ತು ಒಳನಾಡು
  • ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ
  • ಬಸವರಾಜ ರಾಯರೆಡ್ಡಿ- ಉನ್ನತ ಶಿಕ್ಷಣ ಇಲಾಖೆ
  • ಜಮೀರ್ ಅಹ್ಮದ್ ಖಾನ್​-ವಸತಿ ಇಲಾಖೆ
  • ಲಕ್ಷ್ಮಣ ಸವದಿ-ಸಹಕಾರ ಇಲಾಖೆ
  • ಡಾ.ಅಜಯ್​ ಸಿಂಗ್​-ಅರಣ್ಯ ಇಲಾಖೆ
  • ಎಸ್​.ಎಸ್.ಮಲ್ಲಿಕಾರ್ಜುನ-ಗಣಿ ಮತ್ತು ಭೂವಿಜ್ಞಾನ ಇಲಾಖೆ
  • ಹೆಚ್​.ಸಿ.ಬಾಲಕೃಷ್ಣ-ಸಣ್ಣ ನೀರಾವರಿ ಇಲಾಖೆ
  • ಪುಟ್ಟರಂಗ ಶೆಟ್ಟಿ-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:28 am, Wed, 12 August 26

Source link

Leave a Reply

Your email address will not be published. Required fields are marked *