Headlines

ನೇರಳೆ ಹಣ್ಣು ತಿಂದರೆ ನಿಜವಾಗಿಯೂ ಡಯಾಬಿಟಿಸ್ ನಿಯಂತ್ರಿಸಬಹುದೇ? – Kannada News | Jamun and Diabetes: Benefits, Risks and Scientific Facts

ಬೇಸಿಗೆ ಮತ್ತು ಮಳೆಗಾಲದಲ್ಲಿ ಹೆಚ್ಚು ಲಭ್ಯವಾಗುವ ಜಾಮೂನ್ ಹಣ್ಣು ಅಥವಾ ನೇರಳೆ ಹಣ್ಣು (Jamun/Black Plum) ತನ್ನ ವಿಶಿಷ್ಟ ರುಚಿಯ ಜೊತೆಗೆ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ, ನೇರಳೆ ಹಣ್ಣು ತಿಂದರೆ ಮಧುಮೇಹ (ಡಯಾಬಿಟಿಸ್) ನಿಯಂತ್ರಣಕ್ಕೆ ಬರುತ್ತದೆ ಎಂಬ ನಂಬಿಕೆ ವರ್ಷಗಳಿಂದ ಜನರಲ್ಲಿ ಇದೆ. ಕೆಲವರು ಈ ಹಣ್ಣಿನ ಬೀಜವನ್ನು ಒಣಗಿಸಿ ಪುಡಿ ಮಾಡಿ ನೀರಿನಲ್ಲಿ ಬೆರೆಸಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ನಂಬುತ್ತಾರೆ. ಆದರೆ, ಈ ನಂಬಿಕೆ ಎಷ್ಟರ ಮಟ್ಟಿಗೆ ಸತ್ಯ ಮತ್ತು ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೈಲಾಶ್ ದೀಪಕ್ ಆಸ್ಪತ್ರೆಯ ಎಂಡೋಕ್ರಿನಾಲಜಿ ತಜ್ಞ ಡಾ. ನಿಶಾಂತ್ ಜೈನ್ ಅವರ ಪ್ರಕಾರ, ನೇರಳೆ ಹಣ್ಣು ಮಧುಮೇಹಿಗಳಿಗೆ ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ ಇದು ಮಧುಮೇಹಕ್ಕೆ ಔಷಧಿಯಲ್ಲ ಮತ್ತು ವೈದ್ಯರು ಸೂಚಿಸಿದ ಔಷಧಿ ಅಥವಾ ಇನ್ಸುಲಿನ್‌ಗೆ ಪರ್ಯಾಯವೂ ಅಲ್ಲ ಎಂದು ಅವರು ಸ್ಪಷ್ಟಪಡಿಸುತ್ತಾರೆ.

ನೇರಳೆ ಹಣ್ಣಿನಲ್ಲಿರುವ ಪೋಷಕಾಂಶಗಳು

  • ವಿಟಮಿನ್ C
  • ಆಹಾರ ನಾರು (Fiber)
  • ಪೊಟ್ಯಾಸಿಯಮ್
  • ಮೆಗ್ನೀಷಿಯಮ್
  • ಕಬ್ಬಿಣ (Iron)
  • ಆಂಥೋಸಯಾನಿನ್ (Anthocyanins)
  • ಫ್ಲೇವನಾಯ್ಡ್ಸ್ (Flavonoids)
  • ಎಲ್ಯಾಜಿಕ್ ಆಸಿಡ್ (Ellagic Acid)
  • ಜ್ಯಾಂಬೋಲಿನ್ (Jamboline)

ಇವುಗಳು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಾಗಿ ಕಾರ್ಯನಿರ್ವಹಿಸಿ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಸ್ಟ್ರೆಸ್‌ನಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಮಧುಮೇಹ ಇರುವವರಲ್ಲಿ ಈ ರೀತಿಯ ಕೋಶ ಹಾನಿ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ.

ನೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ನಿಯಂತ್ರಿಸಲು ಸಹಾಯ ಮಾಡಬಹುದು?

ಕೆಲವು ಆರಂಭಿಕ ಅಧ್ಯಯನಗಳ ಪ್ರಕಾರ, ನೇರಳೆ ಹಣ್ಣಿನಲ್ಲಿರುವ ಕೆಲವು ನೈಸರ್ಗಿಕ ಸಂಯುಕ್ತಗಳು ಆಹಾರದಲ್ಲಿನ ಪಿಷ್ಟ (Starch) ಸಕ್ಕರೆಯಾಗಿ ಪರಿವರ್ತನೆಯಾಗುವ ವೇಗವನ್ನು ನಿಧಾನಗೊಳಿಸಬಹುದು. ಜೊತೆಗೆ, ದೇಹದಲ್ಲಿ ಇನ್ಸುಲಿನ್ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುವ ಸಾಧ್ಯತೆಯೂ ಇದೆ. ಇದಲ್ಲದೆ, ನೇರಳೆ ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ (GI) ಕಡಿಮೆ ಇರುತ್ತದೆ. ಜೊತೆಗೆ ಇದರಲ್ಲಿ ಫೈಬರ್ ಅಂಶ ಅಧಿಕವಾಗಿ ಇರುವುದರಿಂದ ಊಟದ ನಂತರ ರಕ್ತದಲ್ಲಿನ ಸಕ್ಕರೆ ತಕ್ಷಣ ಏರಿಕೆಯಾಗುವುದಿಲ್ಲ.
ಇದರಿಂದ ಮಧುಮೇಹ ನಿಯಂತ್ರಣಕ್ಕೆ ಸಹಾಯಕವಾಗುವ ಸಾಧ್ಯತೆ ಇದೆ. ಆದರೆ, ಇದನ್ನು ಖಚಿತಪಡಿಸಲು ಇನ್ನೂ ದೊಡ್ಡ ಪ್ರಮಾಣದ ಅಧ್ಯಯನಗಳು ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ನೇರಳೆ ಹಣ್ಣಿನ ಬೀಜದ ಪುಡಿ ನಿಜವಾಗಿಯೂ ಪ್ರಯೋಜನಕಾರಿಯೇ?

ಆಯುರ್ವೇದ ಮತ್ತು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಲ್ಲಿ ನೇರಳೆ ಹಣ್ಣಿನ ಬೀಜದ ಪುಡಿಯನ್ನು ಮಧುಮೇಹ ನಿಯಂತ್ರಣಕ್ಕೆ ಬಳಸಲಾಗುತ್ತದೆ. ಆದರೆ ಇದನ್ನು ಬೆಂಬಲಿಸುವ ಬಲವಾದ ವೈಜ್ಞಾನಿಕ ಸಾಕ್ಷ್ಯಗಳು ಇನ್ನೂ ಸೀಮಿತವಾಗಿವೆ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಜಾಂಬು ಬೀಜದ ಪುಡಿಯನ್ನು ಔಷಧಿಯಂತೆ ಬಳಸುವುದು ಸೂಕ್ತವಲ್ಲ.

ಇದನ್ನೂ ಓದಿ: ವೀಳ್ಯದೆಲೆಯ ಆರೋಗ್ಯ ರಹಸ್ಯ: ತಲೆನೋವು, ಗ್ಯಾಸ್, ಬಾಯಿ ದುರ್ವಾಸನೆಗೆ ನೈಸರ್ಗಿಕ ಪರಿಹಾರ

ಹೆಚ್ಚು ನೇರಳೆ ಹಣ್ಣು ತಿಂದರೆ ಏನಾಗಬಹುದು?

  • ಮಲಬದ್ಧತೆ
  • ಹೊಟ್ಟೆ ಉಬ್ಬರ
  • ಅಜೀರ್ಣ
  • ಹೊಟ್ಟೆ ನೋವಿನಂತಹ ಸಮಸ್ಯೆಗಳು ಕಾಣಿಸಬಹುದು.

ಮಧುಮೇಹಕ್ಕೆ ಈಗಾಗಲೇ ಔಷಧಿ ಅಥವಾ ಇನ್ಸುಲಿನ್ ತೆಗೆದುಕೊಳ್ಳುತ್ತಿರುವವರು ನೇರಳೆ ಹಣ್ಣನ್ನು ಮಿತವಾಗಿ ಸೇವಿಸಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ನೇರಳೆ ಹಣ್ಣು ತಿನ್ನುವಾಗ ಗಮನಿಸಬೇಕಾದ ವಿಷಯಗಳು:

  • ಖಾಲಿ ಹೊಟ್ಟೆಯಲ್ಲಿ ನೇರಳೆ ಹಣ್ಣು ತಿನ್ನಬೇಡಿ.
  • ಹಾಲಿನೊಂದಿಗೆ ಅಥವಾ ಹಾಲು ಕುಡಿಯುವ ಮೊದಲು/ತಕ್ಷಣದ ನಂತರ ನೇರಳೆ ಹಣ್ಣು ಸೇವಿಸಬೇಡಿ.
  • ಒಂದು ಬಾರಿ ಸುಮಾರು 8–10 ನೇರಳೆ ಹಣ್ಣು (ಸುಮಾರು 75–100 ಗ್ರಾಂ) ಸಾಕಾಗಬಹುದು. ನಿಮ್ಮ ಆರೋಗ್ಯ ಸ್ಥಿತಿಗೆ
  • ಅನುಗುಣವಾಗಿ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆಯಿರಿ.
  • ತಾಜಾ ಹಣ್ಣನ್ನೇ ಸೇವಿಸುವುದು ಉತ್ತಮ.

ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:

  • ಸಮತೋಲನ ಆಹಾರ ಸೇವನೆ
  • ಪ್ರತಿದಿನ ವ್ಯಾಯಾಮ
  • ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಪರೀಕ್ಷೆ
  • ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಸೇವಿಸುವುದು
  • ಆರೋಗ್ಯಕರ ಜೀವನಶೈಲಿ ಅನುಸರಿಸುವುದು

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅರ್ಹ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *