Headlines

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ – Kannada News | We Respect judiciary Education Minister Dharmendra Pradhan orders probe into NCERT textbook row

ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8​​ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್‌ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ. 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಪಠ್ಯ ಸೇರಿಸಿದ್ದರಿಂದ ಸುಪ್ರೀಂ ಕೋರ್ಟ್ ಆ ಪುಸ್ತಕದ ಮೇಲೆ ಸಂಪೂರ್ಣ ನಿಷೇಧ ಹೇರಿತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಈ ವಿಷಯವನ್ನು ತಮ್ಮ ಗಮನಕ್ಕೆ ತಂದ ತಕ್ಷಣ ತ್ವರಿತ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಪುಸ್ತಕದ ಎಲ್ಲಾ ಪ್ರತಿಗಳನ್ನು ಹಿಂಪಡೆಯಲು ಮತ್ತು ಅವು ಶಾಲೆಗಳಿಗೆ ತಲುಪದಂತೆ ನೋಡಿಕೊಳ್ಳಲು NCERTಗೆ ಸೂಚಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಅಧ್ಯಾಯವನ್ನು ಹೇಗೆ ತಯಾರಿಸಲಾಗಿದೆ ಮತ್ತು ಅನುಮೋದಿಸಲಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಅವರು ಘೋಷಿಸಿದರು. ಇಂತಹ ದೋಷ ಮರುಕಳಿಸುವುದಿಲ್ಲ ಎಂದು ನ್ಯಾಯಾಂಗಕ್ಕೆ ಭರವಸೆ ನೀಡಿದ ಅವರು ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *