ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ನವದೆಹಲಿ, ಮಾರ್ಚ್ 12: ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋತ ನಂತರ ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ನಾನು ಯಾವುದೇ ಪಕ್ಷಪಾತ ಮಾಡಿಲ್ಲ ಎಂದಿರುವ ಓಂ ಬಿರ್ಲಾ, ಪ್ರತಿ ಸಂಸದರಿಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಸಿಗುವಂತೆ ನೋಡಿಕೊಳ್ಳಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ. ವಿರೋಧ ಪಕ್ಷದ ನಾಯಕರು ಸದನಕ್ಕಿಂತಲೂ ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ.

ನಿನ್ನೆ ವಿಪಕ್ಷದ ಅವಿಶ್ವಾಸ ನಿರ್ಣಯವು ಲೋಕಸಭೆಯಲ್ಲಿ ಸೋತಿತ್ತು. ಇದಾದ ಒಂದು ದಿನದ ನಂತರ, ಸ್ಪೀಕರ್ ಓಂ ಬಿರ್ಲಾ ಇಂದು (ಮಾರ್ಚ್ 12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಥವಾ ಇತರ ಸದಸ್ಯರನ್ನು ಸದನದಲ್ಲಿ ಮಾತನಾಡದಂತೆ ತಡೆಯಲಾಗಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ. “ಪ್ರತಿಯೊಬ್ಬ ಸಂಸದರಿಗೂ ನಿಯಮಗಳ ಪ್ರಕಾರ ಮಾತನಾಡುವ ಹಕ್ಕಿದೆ. ನಾನು ಆ ಅವಕಾಶ ನೀಡಿದ್ದೇನೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ

ಫೆಬ್ರವರಿ 13ರಂದು ಕೊನೆಗೊಂಡ ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ ನಂತರ ಇಂದು ಓಂ ಬಿರ್ಲಾ ಮೊದಲ ಬಾರಿಗೆ ಸದನಕ್ಕೆ ಬಂದರು. ಅಧಿವೇಶನದ ಎರಡನೇ ಭಾಗ ಮಾರ್ಚ್ 9ರಂದು ಪ್ರಾರಂಭವಾಯಿತು.

ವಿರೋಧ ಪಕ್ಷಕ್ಕೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ಸದನವು ಸ್ಥಾಪಿತ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನವನ್ನು ಉದ್ದೇಶಿಸಿ ಮಾತನಾಡುವ ಮೊದಲು ಸ್ಪೀಕರ್​ರಿಂದ ಅನುಮತಿ ಪಡೆಯಬೇಕು. ಲೋಕಸಭೆಯ ನಿಯಮಗಳಿಗಿಂತ ಯಾರೂ ಮೇಲಲ್ಲ ಎಂದು ಅವರು ಒತ್ತಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *