Headlines

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Bengaluru Woman Found Dead: Parents Allege Dowry Harassment by Husband

ಬೆಂಗಳೂರು, ಜನವರಿ 26: 2 ವರ್ಷಗಳ ಹಿಂದೆ ಮದುವೆ ಆಗಿದ್ದ ಮಹಿಳೆಯೋರ್ವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೀರ್ತಿ ಮೃತ ಮಹಿಳೆಯಾಗಿದ್ದು, ವರದಕ್ಷಿಣೆ ಕಿರುಕುಳಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಕಳೆದ 2 ತಿಂಗಳಿಂದ ಕಿರುಕುಳದ ಬಗ್ಗೆ ತಾಯಿ ಬಳಿ ಕೀರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತಲೆ ತಿರುಗಿ ಬಿದ್ದಿದ್ದಳು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಪತ್ನಿ ಪೋಷಕರಿಗೆ ಪತಿ ಗುರುಪ್ರಸಾದ್​​ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್​ಐಆರ್​ ದಾಖಲಾಗಿದೆ.  2023ರ ನವೆಂಬರ್​ನಲ್ಲಿ ಕೀರ್ತಿ, ಗುರುಪ್ರಸಾದ್​ ಮದುವೆ ಆಗಿತ್ತು. ಸುಮಾರು 30-35 ಲಕ್ಷ ಖರ್ಚು ಮಾಡಿ ಮದುವೆ ಮಾಡಿದ್ದರೂ, 2025ರ ಡಿಸೆಂಬರ್​ನಲ್ಲಿ ಮತ್ತೆ 10 ಲಕ್ಷ ಹಣವನ್ನು ಗುರುಪ್ರಸಾದ್ ಕೇಳಿದ್ದ. ಮನೆ ಕಟ್ಟಿಸುವುದಕ್ಕೆ ಹಣ ಕೊಡಿ ಎಂದಿದ್ದರಿಂದ ಕೀರ್ತಿ ಪೋಷಕರು 8 ಲಕ್ಷ ನೀಡಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *