Headlines

ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ ಸಂಬಂಧ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೇನು ನಾಳೆ(ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ತಮ್ಮ ಕನಸಿನ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಸಿಎಂ ಬುಲಾವ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಇಂದು ಮೇ 27) ಸಂಜೆ ವಿಧಾನಸೌಧಕ್ಕೆ ಬರುವಂತೆ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆಗೂ ಮುನ್ನವೇ ಅಂದರೆ ಇಂದೇ ಜಾತಿಗಣತಿ ವರದಿ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಕೆಳದ ಬಾರಿ ಜಾತಿಗಣತಿ ವರದಿ ಸ್ವೀಕಾರ ಮಾಡಿಲ್ಲವೆಂಬ ಆರೋಪ ಇತ್ತು. ಮುಂದೆ ಎಂದೂ ಈ ರೀತಿ ಆರೋಪ ಬರಬಾರದು ಎಂದು ಅರಿತ ಸಿದ್ದರಾಮಯ್ಯ, ಪದತ್ಯಾಗಕ್ಕೂ ಮುನ್ನ ಜಾತಿಗಣತಿ ವರದಿ ಸ್ವೀಕರಿಸಲು ಪ್ಲ್ಯಾನ್ ಮಾಡಿದ್ದಾರೆ. ಇದರೊಂದಿಗೆ ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

Source link

Leave a Reply

Your email address will not be published. Required fields are marked *