ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ – Kannada News | Darshan and Pavithra Gowda take part in International Day of Yoga in Parappana Agrahara Jail

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಜೈಲಿನಲ್ಲಿ ಎಲ್ಲಾ ಕೈದಿಗಳಿಂದ ಯೋಗಭ್ಯಾಸ ಮಾಡಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರು ಕೂಡ ಯೋಗ ದಿನಾಚರಣೆಯಲ್ಲಿ ಭಾಗಿ ಆಗಿದ್ದಾರೆ. ತಮಗೆ ಬೆನ್ನು ನೋವಿನ ಸಮಸ್ಯೆ ಇರುವ ಕಾರಣದಿಂದ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲ್ಲ ಎಂದು ಈ ಮೊದಲು ದರ್ಶನ್ (Darshan) ಹೇಳಿದ್ದರು. ಆದರೆ ಅವರನ್ನು ಕಚೇರಿಗೆ ಕರೆಸಿಕೊಂಡು ಯೋಗ ಮಾಡಲು ಅಲೋಕ್ ಕುಮಾರ್ ಸಲಹೆ ನೀಡಿದರು. ‘ಬೆನ್ನು ನೋವಿದ್ರೆ ಯೋಗ ಮಾಡಿದ್ರೆ ತುಂಬಾ ಒಳ್ಳೆದು’ ಎಂದು ಸಲಹೆ ಕೊಟ್ಟರು. ಆನಂತರ ಜೈಲಿನ ಕಾರಿಡಾರ್​ನಲ್ಲಿ ದರ್ಶನ್ ಅವರು ಯೋಗ ಮಾಡಿದರು. ಸಾಮೂಹಿಕ ಯೋಗದಲ್ಲಿ ಆರೋಪಿ ಪವಿತ್ರಾ ಗೌಡ ಕೂಡ ಭಾಗಿಯಾದರು. ದರ್ಶನ್ ಅವರು ಪ್ರಾಣಾಯಾಮ, ದೀರ್ಘಾದಂಡ ನಮಸ್ಕಾರ, ಶವಾಸನ ಮಾಡಿದ್ದಾರೆ. ಒಂದು ಗಂಟೆಯ ಕಾಲ ಯೋಗದಲ್ಲಿ ಭಾಗಿಯಾದ ಬಳಿಕ ಅವರು ಬ್ಯಾರಕ್​ಗೆ ತೆರಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *