Headlines

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ – Kannada News | Seven bridge cum barrages in Belagavi come under water Says DC muhammad Roshan

ಬೆಳಗಾವಿ, (ಜುಲೈ 06): ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *