ಸಿನಿಮಾ ನಿರ್ಮಾಪಕ ಮತ್ತು ಕನ್ನಡ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿನ್ನೆ ನಿಧನ ಹೊಂದಿದ್ದಾರೆ. ಕೇವಲ 29 ವರ್ಷ ವಯಸ್ಸಿಗೆ ಹೃದಯಾಘಾತದಿಂದ ಅವರು ಅಸುನೀಗಿದ್ದಾರೆ. ಭಾಮಾ ಹರೀಶ್ ಮತ್ತು ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ತೀವ್ರ ದುಃಖದಲ್ಲಿದೆ. ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ. ನಟ ಧ್ರುವ ಸರ್ಜಾ ಇಂದು ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದು, ಭಾಮಾ ಹರೀಶ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
