ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ! – Kannada News | Man sets his own bike afire with cigarette lighter at petrol pump in Raipur

ರಾಯ್​ಪುರ, ಫೆಬ್ರವರಿ 20: ಛತ್ತೀಸ್‌ಗಢದ ರಾಯ್‌ಪುರದ ಪೆಟ್ರೋಲ್ ಬಂಕ್ ಒಂದಕ್ಕೆ ಪೆಟ್ರೋಲ್ ಹಾಕಿಸಲು ಬಂದ ಬೈಕ್​ನಲ್ಲಿದ್ದ ಯುವಕರಲ್ಲಿ ಒಬ್ಬ ಸಿಗರೇಟ್ ಸೇದುತ್ತಿದ್ದ. ಇಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಪೆಟ್ರೋಲ್ ಬಂಕ್​ ಸಿಬ್ಬಂದಿ ಹೇಳುತ್ತಿದ್ದಂತೆ ಆತ ತನ್ನ ಬೈಕ್​ನ ಪೆಟ್ರೋಲ್ ಟ್ಯಾಂಕ್​ಗೆ ಲೈಟರ್​​ನಿಂದ ಬೆಂಕಿ ಹಚ್ಚಿದ್ದಾನೆ. ತಕ್ಷಣ ಆ ಬೈಕ್ ಹೊತ್ತಿ ಉರಿದು, ಪೆಟ್ರೋಲ್ ಬಂಕ್​ಗೂ ಬೆಂಕಿ (Fire Accident) ಆವರಿಸಿಕೊಂಡಿದೆ. ಕೂಡಲೆ ಅಲ್ಲಿದ್ದ ಸಿಬ್ಬಂದಿ ಬೆಂಕಿ ಆರಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಇಡೀ ಪೆಟ್ರೋಲ್ ಬಂಕ್ ಸ್ಫೋಟಗೊಂಡು ದುರಂತ ಸಂಭವಿಸುತ್ತಿತ್ತು. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ್ರಯತ್ನಿಸಿದರು. ಆದರೆ ಪಂಪ್ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದರು. ನಂತರ ಪೊಲೀಸರು ದೂರು ದಾಖಲಿಸಿದರು. ಉರ್ಲಾ ಪೊಲೀಸರು ಅವರನ್ನು ಬಂಧಿಸಿ ಅವರ ಬೈಕ್ ಮತ್ತು ಘಟನೆಯಲ್ಲಿ ಬಳಸಿದ ಲೈಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *