Headlines

‘ಪೆದ್ದಿ’ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲೇ ತಿರುಪತಿ ಬೆಟ್ಟ ಹತ್ತಿದ ಜಾನ್ವಿ ಕಪೂರ್ – Kannada News

ರಾಮ್ ಚರಣ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಇಂದು (ಜೂನ್ 4) ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಜಾನ್ವಿ ಕಪೂರ್ ಅವರು ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಮೆಟ್ಟಿಲುಗಳ ಮಾರ್ಗವಾಗಿ ನಡೆದುಕೊಂಡೇ ಬೆಟ್ಟ ಹತ್ತಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಪ್ರತಿ ಬಾರಿಯೂ ತಮ್ಮ ಯಾವುದೇ ಹೊಸ ಸಿನಿಮಾ ತೆರೆಗೆ ಬರುವ ಮುನ್ನ ತಿರುಪತಿಗೆ ಭೇಟಿ ನೀಡುವುದನ್ನು ಜಾನ್ವಿ ಕಪೂರ್ ರೂಢಿಸಿಕೊಂಡಿದ್ದಾರೆ. ಈ ವಿಶೇಷ ಸಂಪ್ರದಾಯವನ್ನು ಅವರು ಸತತವಾಗಿ ಪಾಲಿಸುತ್ತಾ ಬಂದಿದ್ದಾರೆ. ಈ ಭಕ್ತಿಯ ನಡೆ ಅವರ ಸಿನಿಮಾಗಳ ಮೇಲಿರುವ ಶ್ರದ್ಧೆ ಮತ್ತು ಧಾರ್ಮಿಕ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ.

ಈ ಹಿಂದೆ ತಮ್ಮ ಚೊಚ್ಚಲ ಚಿತ್ರ ‘ಧಡಕ್’ ಬಿಡುಗಡೆಯ ಮುನ್ನ ತಂದೆ ಬೋನಿ ಕಪೂರ್ ಜೊತೆ ಜಾನ್ವಿ ಇಲ್ಲಿಗೆ ಬಂದಿದ್ದರು. ಇತ್ತೀಚಿನ ‘ದೇವರ’ ಮತ್ತು ‘ಪರಂ ಸುಂದರಿ’ ಚಿತ್ರಗಳ ಬಿಡುಗಡೆಯ ವೇಳೆಯೂ ಅವರು ತಿರುಪತಿಗೆ ಭೇಟಿ ನೀಡಿದ್ದರು. ಅವರ ತಾಯಿ, ದಿವಂಗತ ನಟಿ ಶ್ರೀದೇವಿ ಅವರೂ ಸಹ ಪ್ರತಿ ವರ್ಷ ತಮ್ಮ ಜನ್ಮದಿನದಂದು ತಿರುಪತಿಗೆ ಭೇಟಿ ನೀಡುವ ಸಂಪ್ರದಾಯ ಹೊಂದಿದ್ದರು. ತಾಯಿಯ ಅಗಲಿಕೆಯ ನಂತರ ಜಾನ್ವಿ ಕಪೂರ್ ಅದೇ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *