ಬೆಂಗಳೂರು, ಜುಲೈ 31: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳು ಸಣ್ಣಪುಟ್ಟ ಎಡವಟ್ಟುಗಳನ್ನು ಮಾಡಿಕೊಳ್ಳದಂತೆ’ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಅವರು, ‘ಈ ಬಾರಿ ಪರೀಕ್ಷೆ ಮುಗಿದ ತಕ್ಷಣವೇ ಕಲಬುರಗಿ, ರಾಯಚೂರು, ಧಾರವಾಡ, ದಾವಣಗೆರೆ ಹಾಗೂ ಮೈಸೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಓಎಂಆರ್ ಶೀಟ್ಗಳನ್ನು ಸ್ಕ್ಯಾನ್ ಮಾಡಿ, ಮಧ್ಯರಾತ್ರಿಯೊಳಗಾಗಿ ವೆಬ್ಸೈಟ್ನಲ್ಲಿ ಲೈವ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ನಲ್ಲಿ ತಂದೆಯ ಹಾಗೂ ತಮ್ಮ ಆಧಾರ್ ಸಂಖ್ಯೆಗಳನ್ನು ತಪ್ಪಾಗಿ ನಮೂದಿಸಿ, ಆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕೆಇಎ ಮೇಲೆ ಸುಳ್ಳು ಆರೋಪ ಮಾಡಬಾರದು, ಅಂತಹವರ ವಿರುದ್ಧ ಪೊಲೀಸ್ ಇಲಾಖೆಗೆ ದೂರು ನೀಡಲಾಗುವುದು’ ಎಂದರು. ‘ಅಭ್ಯರ್ಥಿಗಳು ಪರೀಕ್ಷೆಗೆ ಮುನ್ನ ಹಾಲ್ ಟಿಕೆಟ್ನಲ್ಲಿರುವ ವಿಳಾಸವನ್ನು ಸರಿಯಾಗಿ ಪರಿಶೀಲಿಸಿ, ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ’ ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.