Headlines

ಪೋಕ್ಸೋ ಕೇಸ್​​: ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್​​ನಿಂದ ವಚನಾನಂದ ಶ್ರೀಗೆ ಜಾಮೀನು ಮಂಜೂರು – Kannada News | Panchamasali Peetha’s Vachanananda Swamiji Secures Regular Bail in POCSO Case

ದಾವಣಗೆರೆ, ಜುಲೈ 13: ಪೋಕ್ಸೋ ಕೇಸ್ ಸಂಬಂಧ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಕೊಂಚ ರಿಲೀಫ್​​ ಸಿಕ್ಕಿದ್ದು, ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಈ ಸಂಬಂಧ ಆದೇಶ ನೀಡಿದ್ದಾರೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀ ಅಜರ್ಜ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ನೀಡಿದೆ.

ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ‌ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ಮೇಲಿದೆ. ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಮತ್ತು ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ್ ವಾದ ಮಂಡನೆ ಮಾಡಿದ್ದರು. ಆ ಬಳಿಕ ವಚನಾನಂದಶ್ರೀಗೆ ಜಾಮೀನು ಸಂಬಂಧ ಅಂತಿಮ ತೀರ್ಪನ್ನು ಇಂದಿಗೆ ಕಾಯ್ದಿರಿಸಿರೋದಾಗಿ ಜುಲೈ 6ರಂದು ವಿಶೇಷ ಪೋಕ್ಸೋ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೊಟ್ಟ ವಿಧಾನ ಸರಿಯಲ್ಲ; ವಚನಾನಂದ ಸ್ವಾಮೀಜಿಗೆ ಹೈಕೋರ್ಟ್​ ಬಿಗ್ ಶಾಕ್

ಸ್ವಾಮೀಜಿಗೆ ಶಾಕ್​​ ಕೊಟ್ಟಿದ್ದ ಹೈಕೋರ್ಟ್​​

ಪೋಕ್ಸೋ ಪ್ರಕರಣಕ್ಕೆ ರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಈ ಹಿಂದೆ ಬಿಗ್ ಶಾಕ್ ಕೊಟ್ಟಿತ್ತು. ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್​ ಮೆಟ್ಟಿಲೇರಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​​, ಕೇಸ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೆ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿ ನ್ಯಾಯಮೂರ್ತಿ ಎಂ‌.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿತ್ತು. ಹೀಗಿದ್ದರೂ ರೆಗ್ಯುಲರ್ ಬೇಲ್​​ಗೆ ಅರ್ಜಿ ಸಲ್ಲಿಸಲು ಸ್ವಾಮೀಜಿಗೆ 3 ವಾರಗಳ ಕಾಲಾವಕಾಶ ನೀಡಿ, ಅಲ್ಲಿಯವರೆಗೂ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಕೆಗೆ ಕೋರ್ಟ್​​ ಸೂಚಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:53 pm, Mon, 13 July 26

Source link

Leave a Reply

Your email address will not be published. Required fields are marked *