
ಹಾಸನ, ಮಾರ್ಚ್ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ಶೀಟ್ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ ಬಹಿರಂಗವಾಗಿ ಹೇಳಿದರೂ ಅವರಿಗೆ ಏಕೆ ನೋಟಿಸ್ ಕೊಡಲಿಲ್ಲ?, ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ. ಪೆನ್ಡ್ರೈವ್ ಹಂಚಿಕೆ ಮಾಡಿದವರ ಹೆಸರೇ ಚಾರ್ಜ್ಶೀಟ್ನಲ್ಲಿ ಇಲ್ಲ. ಹೀಗಾಗಿ ತನಿಖೆ ಮಾಡಿದ ಅಧಿಕಾರಿಗಳನ್ನೇ ತನಿಖೆ ಮಾಡಬೇಕು. ಈ ಬಗ್ಗೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.