Headlines

ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡುವಂತಿಲ್ಲ: ಸಿಜೆಪಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮಕ್ಕೆ ಸುಪ್ರೀಂ ಅಸಮಾಧಾನ – Kannada News | Supreme Court: Peaceful Protests are a Right, Not Justification for Police Lathi charge

ನವದೆಹಲಿ, ಜುಲೈ 27: ಕಳೆದ ವಾರ ನೀಟ್(NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಪ್ರಕರಣವನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅರ್ಜಿಗಳ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪ್ರಮುಖ ಮೌಖಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ಸಂವಿಧಾನದ ಅಡಿಯಲ್ಲಿ ಪ್ರಜೆಗಳಿಗೆ ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಶಾಂತಿಯುತ ಆಂದೋಲನ ನಡೆಯುತ್ತಿರುವಾಗ ಕೇವಲ ಪ್ರತಿಭಟನೆ ಎಂಬ ಕಾರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಪೊಲೀಸರ ಕಡೆಯಿಂದ ಮಿತಿಮೀರಿದ ಬಲಪ್ರಯೋಗ ನಡೆದಿದ್ದರೆ ಅದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕಾಗುತ್ತದೆ. ಪ್ರತಿಭಟನೆಗಳನ್ನು ನಿರ್ವಹಿಸುವಾಗ ಶಿಸ್ತು ಕಾಯ್ದುಕೊಳ್ಳಲು ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲೂ ಏಕರೂಪದ ಪೊಲೀಸ್ ಶಿಷ್ಟಾಚಾರ ಜಾರಿಗೆ ತರುವ ಅಗತ್ಯವಿದೆ.

ಗಾಯಗೊಂಡ ಪೊಲೀಸ್ ಸಿಬ್ಬಂದಿಯ ಕುಟುಂಬಗಳನ್ನು ಪ್ರತಿನಿಧಿಸುವ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಪೀಠ ಅವಕಾಶ ನೀಡಿತು. “ವಿದ್ಯಾರ್ಥಿಗಳಾಗಲಿ ಅಥವಾ ಪೊಲೀಸರಾಗಲಿ, ಯಾರಿಗೇ ಗಾಯಗಳಾದರೂ ಅದು ಸಮಾನ ಕಾಳಜಿಯ ವಿಷಯವಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ರಕ್ಷಣೆಗೆ ಸಾಕಷ್ಟು ಹೆಲ್ಮೆಟ್ ಹಾಗೂ ಉಪಕರಣಗಳನ್ನು ಏಕೆ ಒದಗಿಸಿಲ್ಲ ಎಂದು ರಾಜ್ಯ ಸರ್ಕಾರಗಳನ್ನು ಪ್ರಶ್ನಿಸಲಾಗುವುದು” ಎಂದು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ತಿಳಿಸಿದರು.

ನೀಟ್-ಯುಜಿ 2026 ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ ಹಾಗೂ ಸಾವಿರಾರು ವಿದ್ಯಾರ್ಥಿಗಳು ಸುದೀರ್ಘ ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಾರಗಳ ಹಿಂದೆ ಪೊಲೀಸರು ನಡೆಸಿದ ಬಲಪ್ರಯೋಗ ಹಾಗೂ ಲಾಠಿಚಾರ್ಜ್‌ಗೆ ಹಲವು ವಿದ್ಯಾರ್ಥಿಗಳು ಹಾಗೂ ಪೊಲೀಸರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಯನ್ನು ತೆರವುಗೊಳಿಸುವ ವೇಳೆ ದೆಹಲಿ ಪೊಲೀಸರು ಬಲಪ್ರಯೋಗ ಮಾಡಿದ್ದರು. ಈ ವೇಳೆ ಹಲವು ವಿದ್ಯಾರ್ಥಿಗಳು ಹಾಗೂ ಪೊಲೀಸರು ಗಾಯಗೊಂಡಿದ್ದರು. ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈಗಾಗಲೇ ರಾಜೀನಾಮೆ ನೀಡಿದ್ದು, ಪರೀಕ್ಷಾ ಅಕ್ರಮ ತಡೆಯಲು ಕೇಂದ್ರ ಸರ್ಕಾರ ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಿದೆ.

ಈ ಪ್ರತಿಭಟನೆಗಳ ತೀವ್ರತೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು ಹಾಗೂ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಅನ್ನು ಮಂಡನೆಯಾಗಿದೆ. ಪ್ರಸ್ತುತ ಪ್ರತಿಭಟನೆ ಮುಕ್ತಾಯಗೊಂಡಿದ್ದರೂ, ಪೊಲೀಸರ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *