ಪ್ರತಿಷ್ಠಿತ ‘ಫೋರ್ಬ್ಸ್ 30 ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ದಿವಾ ಉತ್ಕರ್ಷ – Kannada News

ಡಯಾಬಿಟಿಸ್ ಪರೀಕ್ಷೆಯ ಚಿತ್ರImage Credit source: Getty Images

ಬೆಂಗಳೂರು, ಜೂನ್ 2: ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ (NPS) ವಿದ್ಯಾರ್ಥಿನಿಯಾದ 17 ವರ್ಷದ ದಿವಾ ಉತ್ಕರ್ಷ (Divaa Uthkarsha) ಅವರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಫೋರ್ಬ್ಸ್ ಏಷ್ಯಾ ಪಟ್ಟಿಯ ‘ಫೋರ್ಬ್ಸ್ 30 ಅಂಡರ್ 30’ (Forbes 30 Under 30 Asia) ರಕ್ಷಣಾ ಮತ್ತು ವಿಜ್ಞಾನ ವಿಭಾಗದಲ್ಲಿ ದಿವಾ ಅವರು ಸ್ಥಾನ ಪಡೆದಿದ್ದಾರೆ.

ಹೈಸ್ಕೂಲ್ ಇದ್ದಾಗಲೇ ‘ಪ್ರಾಜೆಕ್ಟ್ ಅಮೃತ’ (Project Amrita) ಆರಂಭ

ದಿವಾ ಅವರು ಕೇವಲ 14 ವರ್ಷದವರಿದ್ದಾಗ ತಮ್ಮ ಆಪ್ತ ಸಂಬಂಧಿಯೊಬ್ಬರು ಮಧುಮೇಹ ಮತ್ತು ಮೂತ್ರಪಿಂಡದ (Kidney) ವೈಫಲ್ಯದಿಂದ ಬಳಲುತ್ತಿರುವುದನ್ನು ಕಂಡರು. ಇದು ಅವರ ಮನಸ್ಸಿನ ಮೇಲೆ ತೀವ್ರ ಪರಿಣಾಮ ಬೀರಿತು. ಇದರ ಫಲವಾಗಿ ಅವರು ‘ಪ್ರಾಜೆಕ್ಟ್ ಅಮೃತ’ ಎಂಬ ಲಾಭರಹಿತ ಸಂಸ್ಥೆಯನ್ನು (NGO) ಆರಂಭಿಸಿದರು.

ಈ ಸಂಸ್ಥೆಯ ಮೂಲಕ ದಿವಾ ಅವರು ಭಾರತದ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಟೈಪ್-1 ಮಧುಮೇಹ ಮತ್ತು ಮೂತ್ರಪಿಂಡದ ದೀರ್ಘಕಾಲದ ಕಾಯಿಲೆಗಳ (Chronic Kidney Disease) ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುತ್ತಿದ್ದಾರೆ.

ಇದನ್ನೂ ಓದಿ: ಅಗತ್ಯ ಸಂದರ್ಭದಲ್ಲೇ ಹೆಲ್ತ್ ಇನ್ಷೂರೆನ್ಸ್ ಕ್ಯಾಷ್​ಲೆಸ್ ಕೈಕೊಡಬಹುದು; ಇಲ್ಲಿವೆ ಪ್ರಮುಖ ಕಾರಣಗಳು

ಕಡುಬಡತನದಲ್ಲಿರುವ ಮೂತ್ರಪಿಂಡದ ರೋಗಿಗಳಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಡಯಾಲಿಸಿಸ್ (Dialysis) ಚಿಕಿತ್ಸೆ ಕೊಡಿಸಲು ಇವರ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಇದಕ್ಕಾಗಿ ದಿವಾ ಅವರು ಯುವಕರ ತಂಡವನ್ನು ಕಟ್ಟಿಕೊಂಡು ದೊಡ್ಡ ಮಟ್ಟದಲ್ಲಿ ನಿಧಿ ಸಂಗ್ರಹಣೆ (Crowdfunding) ಮಾಡಿದ್ದಾರೆ.

ಫೋರ್ಬ್ಸ್ ಮೆಚ್ಚುಗೆ: ಕೇವಲ ಪಠ್ಯಪುಸ್ತಕದ ಓದಿಗೆ ಸೀಮಿತವಾಗದೆ, ಹದಿಹರೆಯದಲ್ಲೇ ಸಮಾಜದ ಅತ್ಯಂತ ಗಂಭೀರವಾದ ಆರೋಗ್ಯ ಸಮಸ್ಯೆಯೊಂದಕ್ಕೆ ಸ್ಪಂದಿಸಿ, ನೂರಾರು ರೋಗಿಗಳ ಜೀವ ಉಳಿಸಲು ಕಾರಣರಾಗಿರುವ ದಿವಾ ಅವರ ನಾಯಕತ್ವ ಮತ್ತು ಮಾನವೀಯ ಗುಣವನ್ನು ಫೋರ್ಬ್ಸ್ ಜಾಗತಿಕ ಮಟ್ಟದಲ್ಲಿ ಶ್ಲಾಘಿಸಿದೆ.

ಡಯಾಲಿಸಿಸ್ ಮಟ್ಟಕ್ಕೆ ಹೋಗುವುದನ್ನು ತಪ್ಪಿಸುವುದು ಉದ್ದೇಶ

“ನಮ್ಮ ದೇಶದಲ್ಲಿ ಬಡತನದ ಕಾರಣದಿಂದಾಗಿ ಅನೇಕರು ಡಯಾಲಿಸಿಸ್ ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸಿ ಜೀವ ಕಳೆದುಕೊಳ್ಳುತ್ತಾರೆ. ಇದನ್ನು ತಡೆಯುವುದೇ ನಮ್ಮ ಸಂಸ್ಥೆಯ ಮುಖ್ಯ ಗುರಿ. ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಸಿಕ್ಕಿರುವುದು ನನ್ನ ವೈಯಕ್ತಿಕ ಸಾಧನೆಗಿಂತ ಹೆಚ್ಚಾಗಿ, ನಾವು ಮಾಡುತ್ತಿರುವ ಕೆಲಸಕ್ಕೆ ಸಿಕ್ಕ ಜಾಗತಿಕ ಮಾನ್ಯತೆಯಾಗಿದೆ” ಎಂದು ದಿವಾ ಹೇಳುತ್ತಾರೆ.

ಇದನ್ನೂ ಓದಿ: ಭಾರತ ಈಗ ಗ್ಲೋಬಲ್ ಬ್ಯಾಕ್ ಆಫೀಸ್ ಮಾತ್ರವೇ ಅಲ್ಲ, ವಿಶ್ವದರ್ಜೆ ಪ್ರಾಡಕ್ಟ್ ನೀಡುವ ದೇಶವಾಗಿದೆ: ಪ್ರಸಾದ್ ಷಣ್ಮುಗಂ

ಕೇವಲ 17ನೇ ವಯಸ್ಸಿನಲ್ಲಿ ಇಡೀ ಏಷ್ಯಾ ಖಂಡದಲ್ಲೇ ಅತ್ಯಂತ ಪ್ರಭಾವಶಾಲಿ ಯುವ ಸಾಧಕಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಬೆಂಗಳೂರಿನ ದಿವಾ ಉತ್ಕರ್ಷ ಅವರ ಈ ಪಯಣ ಇಂದಿನ ಯುವ ಪೀಳಿಗೆಗೆ ನಿಜಕ್ಕೂ ದೊಡ್ಡ ಪ್ರೇರಣೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *