ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ.
ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಯೋಗ ಗುರು ಬಾಬಾ ರಾಮದೇವ್ ಕೂಡ ಪ್ರತಿದಿನ ಬೆಳಿಗ್ಗೆ ಪ್ರಾಣಾಯಾಮ ಮಾಡಲು ಶಿಫಾರಸು ಮಾಡುತ್ತಾರೆ. ಅವರ ಪ್ರಕಾರ, ನಿಯಮಿತ ಅಭ್ಯಾಸವು ದೇಹದ ನ್ಯಾಚುರಲ್ ಇಮ್ಯೂನಿಟಿಯನ್ನು ಬಲಪಡಿಸಿ, ಅನೇಕ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಲ್ಲುದು. ಈ ಸಂದರ್ಭದಲ್ಲಿ, ಬಾಬಾ ರಾಮದೇವ್ ಶಿಫಾರಸು ಮಾಡಿದ ಕೆಲವು ಪ್ರಾಣಾಯಾಮಗಳು ವಿಶೇಷವಾಗಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಪ್ರತಿದಿನ ಬೆಳಿಗ್ಗೆ ಈ ಪ್ರಾಣಾಯಾಮಗಳನ್ನು ಮಾಡಿ
ಕಪಾಲಭಾತಿ ಪ್ರಾಣಾಯಾಮ
ಬಾಬಾ ರಾಮದೇವ್ ವಿವರಿಸುವಂತೆ ಈ ಕಪಾಲಭಾತಿ ಪ್ರಾಣಾಯಾಮವು ತ್ವರಿತ ಉಸಿರಾಟ ಕ್ರಮವನ್ನು ಒಳಗೊಂಡಿರುತ್ತದೆ. ಇದು ಜೀರ್ಣಾಂಗ ವ್ಯವಸ್ಥೆ ಬಲಪಡಿಸಲು, ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಒಳಗಿನಿಂದ ಸಕ್ರಿಯವಾಗಿಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಜೇನುತುಪ್ಪದ ಪ್ರಯೋಜನಗಳೇನು, ಪತಂಜಲಿ ಜೇನುತುಪ್ಪದ ಶುದ್ಧತೆ ಎಷ್ಟು? ಇಲ್ಲಿದೆ ಮಾಹಿತಿ
ಅನುಲೋಮ-ವಿಲೋಮ ಪ್ರಾಣಾಯಾಮ
ಈ ಅಭ್ಯಾಸವು ಎರಡೂ ಮೂಗಿನ ಹೊಳ್ಳೆಗಳ ಮೂಲಕ ಪರ್ಯಾಯವಾಗಿ ಉಸಿರನ್ನು ಒಳಗೆಳೆದುಕೊಳ್ಳುವುದು ಮತ್ತು ಹೊರಹಾಕುವುದನ್ನು ಒಳಗೊಂಡಿರುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ದೇಹದಲ್ಲಿ ಶಕ್ತಿಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಭಸ್ತ್ರಿಕಾ ಪ್ರಾಣಾಯಾಮ
ಈ ಪ್ರಾಣಾಯಾಮವು ತ್ವರಿತವಾಗಿ ಉಸಿರು ಒಳಗೆಳೆದುಕೊಳ್ಳುವುದು ಮತ್ತು ಹೊರಹಾಕುವ ಕ್ರಮ ಹೊಂದಿದೆ. ಭಸ್ತ್ರಿಕಾ ಪ್ರಾಣಾಯಾಮದಿಂದ ಶ್ವಾಸಕೋಶ ಬಲಗೊಳ್ಳುತ್ತದೆ, ಮತ್ತು ದೇಹಕ್ಕೆ ಆಮ್ಲಜನಕದ ಪೂರೈಕೆ ಸುಧಾರಿಸುತ್ತದೆ.
ಭ್ರಮರಿ ಪ್ರಾಣಾಯಾಮ
ಭಮರಿ ಪ್ರಾಣಾಯಾಮದಲ್ಲಿ ದೀರ್ಘವಾಗಿ ಉಸಿರು ಒಳಗೆಳೆದುಕೊಳ್ಳಬೇಕು. ಎರಡೂ ಕಿವಿಗಳನ್ನು ಕೈ ಬೆರಳಿನಿಂದ ಮುಚ್ಚಿ, ಬಾಯಿಯನ್ನೂ ಮುಚ್ಚಿ, ಜೇನ್ನೊಣದ ರೀತಿಯಲ್ಲಿ ಶಬ್ದ ಮಾಡುತ್ತಾ ಮೂಗಿನಿಂದ ಉಸಿರು ಹೊರಹಾಕಬೇಕು. ಇದು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಾನಸಿಕ ಶಾಂತಿಯನ್ನು ಸಾಧಿಸಲು ಪ್ರಯೋಜನಕಾರಿ ಎಂದು ನಂಬಲಾಗಿದೆ.
ಪ್ರಾಣಾಯಾಮದಿಂದ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ?
ಬೆಳಗ್ಗೆ ನಿಯಮಿತವಾಗಿ ಪ್ರಾಣಾಯಾಮ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ ಮತ್ತು ದೇಹವು ಅನಾರೋಗ್ಯದ ವಿರುದ್ಧ ಹೋರಾಡಲು ಹೆಚ್ಚು ಸಮರ್ಥವಾಗುತ್ತದೆ. ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಉತ್ತಮ ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ.
ಪ್ರಾಣಾಯಾಮವನ್ನು ಅಭ್ಯಾಸ ಮಾಡುವವರು ದಿನವಿಡೀ ಚೆನ್ನಾಗಿ ನಿದ್ರಿಸುತ್ತಾರೆ ಮತ್ತು ಹೆಚ್ಚು ಚೈತನ್ಯಶೀಲರಾಗಿರುತ್ತಾರೆ. ಇದಲ್ಲದೆ, ಜೀರ್ಣಕ್ರಿಯೆ, ಉಸಿರಾಟದ ತೊಂದರೆಗಳು ಮತ್ತು ಆಯಾಸದಲ್ಲಿ ಸುಧಾರಣೆಗಳನ್ನು ಕಾಣಬಹುದು.
ಇದನ್ನೂ ಓದಿ: ಪತಂಜಲಿ ಲೋಹಾಸವ ಸಿರಪ್; ಏನಿದು, ಯಾಕಾಗಿ ಬೇಕು, ಇದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ
ಇದು ಉತ್ತಮ ಆರೋಗ್ಯಕ್ಕೂ ಮುಖ್ಯ
ಪ್ರಾಣಾಯಾಮದ ಜೊತೆಗೆ, ಸಮತೋಲಿತ ಆಹಾರವು ಉತ್ತಮ ಆರೋಗ್ಯಕ್ಕೆ ಅತ್ಯಗತ್ಯ. ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ ಮತ್ತು ಸಮಯಕ್ಕೆ ಸರಿಯಾಗಿ ಊಟ ಮಾಡಿ. ನಿಯಮಿತ ದೈಹಿಕ ಚಟುವಟಿಕೆ ಮತ್ತು ಸಾಕಷ್ಟು ನಿದ್ರೆಯನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಳ್ಳಿ.
ನಿಮ್ಮ ಮೊಬೈಲ್ ಫೋನ್ ಮತ್ತು ಸ್ಕ್ರೀನ್ ಸಮಯವನ್ನು ಮಿತಿಗೊಳಿಸಿ ಮತ್ತು ನಿಮಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳಿ. ಈ ಅಭ್ಯಾಸಗಳ ಜೊತೆಗೆ ಪ್ರಾಣಾಯಾಮವನ್ನು ಅಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡನ್ನೂ ಆರೋಗ್ಯಕರವಾಗಿರುತ್ತದೆ.
ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ