ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ – Kannada News | CM DK Shivakumar talks about Drought situation In karnataka

ಚಿತ್ರದುರ್ಗ, (ಜುಲೈ 25): ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ ಮಾಡಬೇಡಿ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿ ಎಂದು ಕರೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *