Headlines

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ! – Kannada News | Mysuru Murder: Wife, Lover Arrested for Javarappa’s Death Over Illicit Affair in Kurneegala

ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada

ಮೈಸೂರು, ಏಪ್ರಿಲ್​​ 19: ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ.

ಕುರ್ಣೇಗಾಲದಲ್ಲಿ ಮೊನ್ನೆಯಷ್ಟೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಜವರಪ್ಪ ಶವ ರಸ್ತೆಬದಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಜವರಪ್ಪ ಸಹೋದರ ರವಿ ನೀಡಿದ್ದ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಸಾವಿನ ಹಿಂದಿನ ಸತ್ಯವನ್ನು ರಿವೀಲ್​​ ಮಾಡಿದ್ದಾರೆ. ಆರೋಪಿ ಸಿದ್ದೇಶ್​​ಗೆ ಜವರಪ್ಪ ಪತ್ನಿ ಅಮೃತಾ ಜೊತೆಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ ಆತ ಇದ್ದರೆ ತಮ್ಮ ಸಂಬಂಧಕ್ಕೆ ತೊಂದರೆ ಆಗುತ್ತೆ ಎಂದು ಆರೋಪಿಗಳು ಜವರಪ್ಪನ ಕೊಲೆಗೆ ಪ್ಲ್ಯಾನ್​​ ಮಾಡಿದ್ದರು. ಅದರಂತೆ ಅಮೃತಾ ಕುಮ್ಮಕ್ಕಿನಿಂದ ಆಕೆಯ ಪ್ರಿಯಕರ ಸಿದ್ದೇಶ್​​ನೇ ಕೊಲೆ ಮಾಡಿರೋದು ಗೊತ್ತಾಗಿದೆ.

ಇದನ್ನೂ ಓದಿ: ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು; ಮಂಗಳೂರು-ಕೇರಳದಲ್ಲಿ ಅನೈತಿಕ ಚಟುವಟಿಕೆಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದಳು.ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಬದಲಾಗಿ ಮರುದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆಗಾಗಿ ಎಸ್. ಪಿ. ಮಲ್ಲಿಕಾರ್ಜುನ ಬಾಲದಂಡಿ ಮೂರು ತಂಡಗಳನ್ನು ರಚನೆ ಮಾಡಿದ್ದರು. ಅಂತಿಮವಾಗಿ ಜವರಪ್ಪ ಸಾವಿನ ಸತ್ಯ ಹೊರಬಂದಿದ್ದು, ಪ್ರಿಯಕರನ ಜೊತೆ ಸೇರಿ ಪತ್ನಿಯೇ ಆತನ ಸಾವಿಗೆ ಕಾರಣವಾಗಿರೋದು ನಿಜಕ್ಕೂ ದುರ್ದೈವವೇ ಸರಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:39 am, Sun, 19 April 26

Source link

Leave a Reply

Your email address will not be published. Required fields are marked *