ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ – Kannada News | Amrutahalli: Parental Opposition to Love Marriage Leads to Youth Suicide

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ

ಇದರಿಂದ ನೊಂದ ರಾಮ್ ಕುಮಾರ್, ಪೋಷಕರು ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *