Headlines

ಪ್ರೇಯಸಿ ಜೊತೆ ಕಾರಿನಲ್ಲಿ ಹೋಗುತ್ತಿರುವಾಗಲೇ ನಾಡಬಾಂಬ್​ ಸ್ಫೋಟಿಸಿದ ಪ್ರಿಯಕರ: ಆಗಿದ್ದೇನು? – Kannada News | Boyfriend Detonates Crude Bomb While Riding in Car With Girlfriend: What Happened

ಸುಟ್ಟುಕರಕಲಾದ ಕಾರುImage Credit source: tv9 kannada

ತುಮಕೂರು, ಜೂನ್​​ 27: ಕಾರಿನಲ್ಲಿ ನಾಡಬಾಂಬ್ (nada bomb)​ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತ ಭೀಕರ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ನಾಗೇಂದ್ರ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಇನ್ನು ಈ ದುರಂತದಲ್ಲಿ ಅಪಹರಣಕ್ಕೊಳಗಾಗಿದ್ದ ಯುವತಿ ಹಾಗೂ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಎಸ್​ಪಿ ವೆಂಕಟ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಮತ್ತೊಂದು ಜೀವಂತ ಬಾಂಬ್ ಪತ್ತೆ ಆಗಿದೆ.

ನಡೆದಿದ್ದೇನು?

ರಮ್ಯಾ ಹಾಗೂ ನಾಗೇಂದ್ರ ಇಬ್ಬರು ಅಂಕೋಲ ಮೂಲದವರು. ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ರಮ್ಯಾ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರೆ, ನಾಗೇಂದ್ರ ಡೆಲಿವರಿ ಬಾಯ್ ಆಗಿದ್ದ. ಇಬ್ಬರು ಕಳೆದ ಏಳೆಂಟು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ರಮ್ಯಾ ಮದುವೆಗೆ ನಿರಾಕರಿಸಿದ್ದಳು.

ರಮ್ಯಾಳನ್ನ ಬಲವಂತವಾಗಿ ಕಿಡ್ನ್ಯಾಪ್ ಮಾಡಿದ ನಾಗೇಂದ್ರ

ಇದರಿಂದ ಕೋಪಗೊಂಡಿದ್ದ ನಾಗೇಂದ್ರ, ತಾನೇ ಒಂದು ಬಾಡಿಗೆ ಕಾರನ್ನು ಬುಕ್ ಮಾಡಿಕೊಂಡು, ರಮ್ಯಾ ತಂಗಿದ್ದ ಬೆಂಗಳೂರಿನ ಪಿಜಿ ಬಳಿ ತೆರಳಿ ಆಕೆಯನ್ನು ಬಲವಂತವಾಗಿ ಅಪಹರಿಸಿದ್ದ. ನಾಗೇಂದ್ರ ಪ್ಲ್ಯಾನ್​ ಮಾಡಿ ನಾಡಬಾಂಬ್ ತಯಾರಿಸಿಕೊಂಡು ತಂದಿದ್ದ ಎಂಬ ಮಾಹಿತಿ ಇದೆ. ರಮ್ಯಾ ನಾಪತ್ತೆ ಕುರಿತು ಆಕೆಯ ಸ್ನೇಹಿತೆ ತಕ್ಷಣವೇ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಗದಗ: ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್ ಬಡ್ಡಿ ದಂಧೆಕೋರರು, ಎಸ್ಪಿ ಕಚೇರಿ ಎದುರು ಸಂತ್ರಸ್ತೆಯರ ಕಣ್ಣೀರು

ಇನ್ನು ರಮ್ಯಾಳನ್ನು ಕಿಡ್ನ್ಯಾಪ್ ಮಾಡಿದ ನಾಗೇಂದ್ರ ಶಿರಾ ರಸ್ತೆಯಲ್ಲಿ ತೆರಳುತ್ತಿದ್ದ. ಕಾರಿನಲ್ಲೇ ಇಬ್ಬರ ಮಧ್ಯೆ ತೀವ್ರ ಜಗಳ ನಡೆದಿದೆ. ಈ ವೇಳೆ ನಾಗೇಂದ್ರ ರಮ್ಯಾ ತಲೆಗೆ ಆಯುಧದಿಂದ ಹೊಡೆದಿದ್ದಾನೆ. ರಮ್ಯಾ ತಕ್ಷಣವೇ ಚಲಿಸುವ ಕಾರಿನಿಂದ ಹೊರಗೆ ಜಿಗಿದು ಜೀವ ಉಳಿಸಿಕೊಂಡಿದ್ದಾಳೆ. ಯುವತಿ ಕಾರಿನಿಂದ ಇಳಿದಾಗ ಚಾಲಕ ಸಹಾಯಕ್ಕೆ ತೆರಳಿದ್ದಾನೆ.

ಕಾರಿನೊಳಗೇ ಸಜೀವ ದಹನ

ಇದೇ ಸಮಯವನ್ನು ಬಳಸಿಕೊಂಡ ನಾಗೇಂದ್ರ ಕಾರಿನ ಎಲ್ಲಾ ಡೋರ್‌ಗಳನ್ನು ಒಳಗಿನಿಂದ ಲಾಕ್ ಮಾಡಿಕೊಂಡು, ತಾನು ತಂದಿದ್ದ ನಾಡಬಾಂಬ್ ಅನ್ನು ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಗೇಂದ್ರ ಕಾರಿನೊಳಗೇ ಸಜೀವ ದಹನವಾಗಿದ್ದಾನೆ.

ಇದನ್ನೂ ಓದಿ: ಆಸ್ತಿಗಾಗಿ ತಂದೆ ಕಥೆಯನ್ನೇ ಮುಗಿಸಿದ್ರಾ ಮಕ್ಕಳು?: ದೂರು, ಪ್ರತಿದೂರಿನ ಹಿನ್ನೆಲೆ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಸದ್ಯ ಪ್ರಕರಣ ಭಾರಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಿಂದ ಪರಿಶೀಲನಾ ತಂಡ ಆಗಮಿಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಮತ್ತು ಕಳ್ಳಂಬೆಳ್ಳ ಪೊಲೀಸರು ಜಂಟಿ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *