ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ ತೆರವು ಕಾರ್ಯ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
