ಯಾದಗಿರಿ, (ಮಾರ್ಚ್ 05): ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಪ್ರತ್ರಕ್ಷರಾಗಿದ್ದು, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಜೆ ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣ ಅವರು ವಿಚಾರಣೆ ನಡೆಸಿದ್ದಾರೆ. ಬಳಿಕ ಮುತ್ಯಾನ ನಾಲ್ಕು ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಂಡು ಕಳುಹಿಸಿದ್ದಾರೆ.
ಇನ್ನು ವಿಚಾರಣೆ ಬಳಿಕ ಪೊಲೀಸ್ ಠಾಣೆಯಿಂದ ಹೊರ ಬಂದ ಮಲ್ಲಿಕಾರ್ಜುನ ಮುತ್ಯಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ನೋಟೀಸ್ ಕೊಟ್ಟಿದ್ದರಿಂದ ವಿಚಾರಣೆಗೆ ಬಂದಿದ್ದೆನೆ. ಪೊಲೀಸರು ಕರೆದ್ರೆ ವಿಚಾರಣೆಗೆ ಬರುತ್ತೆನೆ ಅಂತ ನಾನು ಮೊದಲೇ ವಿಡಿಯೋ ಹೇಳಿಕೆ ನೀಡಿದ್ದೆ. ಆದ್ರೆ, ನೋಟೀಸ್ ಕೊಟ್ಟ ಬಳಿಕ ನನಗೆ ಹುಷಾರಿರಲಿಲ್ಲ. ಅದಕ್ಕೆ ಮೂರು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದೆನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೆನೆ. ಮತ್ತೆ ಕರೆದ್ರೆ ವಿಚಾರಣೆಗೆ ಹಾಜರಾಗುತ್ತೆನೆ ಎಂದು ಸ್ಪಷ್ಟಪಡಿಸಿದರು.
ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
