Headlines

ಬಂದ್ ನಡುವೆಯೂ ಮೆಜೆಸ್ಟಿಕ್‌ನಲ್ಲಿ ಬಸ್ ಸಂಚಾರ ಯಥಾಸ್ಥಿತಿ: ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆ ಕ್ಷೀಣ – Kannada News | Cauvery Dispute: Bengalurus Transport Unaffected by Karnataka Bandh Call.

ಬೆಂಗಳೂರು, ಆ.13: ಕಾವೇರಿ ನೀರು ಬಿಡುಗಡೆ ವಿವಾದದ ಹಿನ್ನಲೆಯಲ್ಲಿ ವಾಟಾಳ್ ನಾಗರಾಜ್ ಅವರು ಕರೆ ನೀಡಿದ ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಮನವಿ ಮಾಡಲಾಗಿತ್ತು. ಬಂದ್‌ ಇದ್ದರೂ, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಸಂಚಾರ ಯಥಾಸ್ಥಿತಿಯಲ್ಲಿದೆ. ಪ್ರಯಾಣಿಕರಲ್ಲಿ ಆತಂಕದ ವಾತಾವರಣವಿದ್ದರೂ, ಬಿಎಂಟಿಸಿ ಬಸ್‌ಗಳು ಎಂದಿನಂತೆ ಬೆಳಗ್ಗೆ 4:30ರಿಂದಲೇ ಸಂಚಾರ ಆರಂಭಿಸಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳೂ ಸಹ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆದರೆ, ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಪ್ರತಿದಿನ 45 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಅವಲಂಬಿಸುತ್ತಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *