ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ. ಅಂಬೇಡ್ಕರ್ ಜಯಂತಿ ಒಳಗಾಗಿ ವ್ಯಾಜ್ಯ ಬಗೆ ಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೊಲೀಸರು ವಿಷದ ಬಾಟಲ್ ಕಿತ್ತುಕೊಂಡು ಬುದ್ದಿವಾದ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *