Headlines

ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi

ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್​​ ರೂಮ್​​​ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು ಹಾಗೂ ಶಿಕ್ಷಿಕಯ ಕಡೆಯವರು ವಿದ್ಯಾರ್ಥಿಗಳ ಸಮ್ಮುಖದಲ್ಲೇಹೊಡೆದಾಟದ ಹಂತಕ್ಕೆ ತಲುಪಿದ್ದಾರೆ. ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಅವರು ಹೊರಗಿನ ಜನರನ್ನು ಕರೆಸಿ ತನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ಶಿಕ್ಷಕಿ ರೇಷ್ಮಾ ಗಂಭೀರವಾಗಿ ಆರೋಪಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *