Headlines

ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure

ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ ಉಳುಮೆ ಮಾಡುತ್ತಿರುವುದು ಅವರ ಆರ್ಥಿಕ ಸಂಕಷ್ಟಕ್ಕೆ ಹಿಡಿದ ಕನ್ನಡಿಯಾಗಿದೆ. ತೊಗರಿ ಬೆಳೆ ಹಾಕಿ ಅದು ವಿಫಲವಾದ ನಂತರವೂ, ಬದುಕು ಸಾಗಿಸಲು ಅನಿವಾರ್ಯವಾಗಿ ಮತ್ತೊಮ್ಮೆ ಬಿತ್ತನೆಗೆ ಮುಂದಾಗಿದ್ದಾರೆ. ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಈ ದಂಪತಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ತಲೆದೋರಿರುವ ಮಳೆ ಅಭಾವ ಮತ್ತು ಬರಗಾಲದ ಸಂಕಷ್ಟಕ್ಕೆ ಈ ದಂಪತಿಯ ಹೋರಾಟ ಒಂದು ಜೀವಂತ ಉದಾಹರಣೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *