ಬಾಂಗ್ಲಾದೇಶ, ಡಿಸೆಂಬರ್ 29: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಹಿಂದೂ ಯುವಕ ದೀಪು ಚಂದ್ರ ದಾಸ್ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಒಂದೆಡೆ ನಡೆಯುತ್ತಿವೆ. ಪಿರೋಜ್ಪುರದ ಡುಮ್ರಿಟೋಲಾ ಗ್ರಾಮದಲ್ಲಿರುವ ಸಹಾ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.
ಚಟ್ಟೋಗ್ರಾಮ್ನ ರೌಜಾನ್ನಲ್ಲಿ, ಜಿಹಾದಿಗಳು ಬೆಳಗಿನ ಜಾವ ಹಿಂದೂ ಮನೆಗಳಿಗೆ ಅದೇ ರೀತಿ ಬೆಂಕಿ ಹಚ್ಚಿದ್ದರು. ದೇಶದಲ್ಲಿ ಉಳಿದಿರುವ ಎಲ್ಲಾ ಹಿಂದೂ ಮನೆಗಳನ್ನು ಹೀಗೆಯೇ ಸುಡುತ್ತಾರೆಯೇ? ಹಿಂದೂಗಳನ್ನು ಸಜೀವದಹನ ಮಾಡುವುದೇ ಅವರ ಗುರಿಯೇ ಎನ್ನುವ ಅನುಮಾನ ಮೂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ