ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ ಸಂಘಟನೆ ಮಾಡಿ ಬಲ ತುಂಬಬೇಕು ಅಂತ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ.
