
ಚಿಕ್ಕಮಗಳೂರು, ಏಪ್ರಿಲ್ 12: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಕೇರಳ ಮೂಲದ ಬಾಲಕಿ ಪ್ರಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಬಳಿಕವೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಸೋಲಾರಣ್ಯ ಪ್ರದೇಶ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸುತ್ತಮುತ್ತ ಪ್ರವಾಸಿಗರು ಅಪಾಯಕಾರಿ ಗುಡ್ಡಗಾಡು ಪ್ರದೇಶಗಳಲ್ಲಿ ನಿರ್ಬಂಧವಿಲ್ಲದೆ ಸಂಚರಿಸುತ್ತಿದ್ದಾರೆ. ಪ್ರಪಾತಗಳ ಅಂಚಿನಲ್ಲಿ ಸೆಲ್ಫಿ, ಫೋಟೋಶೂಟ್ ಹುಚ್ಚಿನಿಂದ ಅಪಾಯವನ್ನು ಲೆಕ್ಕಿಸದೆ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದ ಹೊರಗಿನಿಂದ ಸಹ ಸಾವಿರಾರು ಮಂದಿ ಪ್ರತಿದಿನ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಪ್ರವಾಸಿ ತಾಣದ ಭದ್ರತೆಗೆ ಕಪ್ಪು ಚುಕ್ಕಿ ಬೀಳುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ