ಹೈದರಾಬಾದ್, ಮೇ 07: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ವಿರುದ್ಧ ಬಿಆರ್ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ ಗಂಗುಲ ಕಮಲಾಕರ್ ಅವರ ಕ್ಯಾಂಪ್ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ ನಡೆಸಿದ್ದಾರೆ. ಬಿಆರ್ಎಸ್ ಶಾಸಕ ಕೌಶಿಕ್ ರೆಡ್ಡಿ ಒಳಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಬಿಜೆಪಿ ಬೆಂಬಲಿತರು ಧ್ವಂಸಗೊಳಿಸಿದ್ದು, ಕೂಡಲೇ ಲಘು ಲಾಠಿ ಪ್ರಹಾರ ನಡೆಸಿ ಪೊಲೀಸರು ಗುಂಪು ಚದುರಿಸಿದ ಪ್ರಸಂಗ ನಡೆದಿದೆ.
ಬಿಜೆಪಿಗರ ಆಕ್ರೋಶಕ್ಕೆ ಕಾರಣ ಏನು?
ಕೆಟಿಆರ್ ಡ್ರಗ್ ಟೆಸ್ಟ್ ಮಾಡಿಸಬೇಕು ಎಂಬ ಬಂಡಿ ಸಂಜಯ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಕೌಶಿಕ್ ರೆಡ್ಡಿ, ಬಂಡಿ ಸಂಜಯ್ ಕೂಡ ಡ್ರಗ್ ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಸವಾಲು ಹಾಕಿದ್ದರು. ಅಲ್ಲದೆ, ಮಾದಕ ವಸ್ತು ಮಿಶ್ರಿತ ತಂಬಾಕು ಸೇವನೆಯ ಪರಿಣಾಮದಿಂದಲೇ ಬಂಡಿ ಸಂಜಯ್ ಅವರ ಕೂದಲು ಉದುರಿದೆ ಎಂದು ಟೀಕಿಸಿದ್ದರು. ಈ ಹೇಳಿಕೆ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ; ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ
ಘಟನೆಗೆ ಬಿಆರ್ಎಸ್ ಕಿಡಿ
సిగ్గు.. సిగ్గు! కేంద్ర హోం శాఖ సహాయ మంత్రి బండి సంజయ్ స్వయంగా దాడులు చేయించడం సిగ్గుచేటు 😡
కరీంనగర్ ఎమ్మెల్యే క్యాంప్ కార్యాలయంపై విచక్షణారహితంగా దాడికి తెగబడ్డ బీజేపీ రౌడీ మూకలు.. క్యాంప్ ఆఫీస్ ఫర్నిచర్, అద్దాలు, కారు ధ్వంసం!
కేంద్ర హోం శాఖ సహాయ మంత్రిగా ఉన్న బండి సంజయ్… pic.twitter.com/2xgFA3vEvC
— BRS Party (@BRSparty) May 7, 2026
ಇನ್ನು ಘಟನೆ ಬಗ್ಗೆ ಎಕ್ಸ್ ಪೋಸ್ಟ್ ಮಾಡಿ ಬಿಆರ್ಎಸ್ ಕಿಡಿ ಕಾರಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಸ್ವತಃ ದಾಳಿಗೆ ಸಂಚು ರೂಪಿಸಿರುವುದು ಅತ್ಯಂತ ಖಂಡನೀಯ. ಬಿಜೆಪಿ ಗೂಂಡಾಗಳು ಕರೀಂನಗರ ಶಾಸಕರ ಕ್ಯಾಂಪ್ ಕಚೇರಿಯ ಮೇಲೆ ದಾಳಿ ನಡೆಸಿ ಫೋಠೋಪಕರಣಗಳು, ಬಾಗಿಲುಗಳು ಹಾಗೂ ಕಾರನ್ನು ಧ್ವಂಸಗೊಳಿಸಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಲ್ಲಿರುವ ಬಂಡಿ ಸಂಜಯ್ ಸ್ವತಃ ಬಿಜೆಪಿ ಕಾರ್ಯಕರ್ತರನ್ನು ಪ್ರೇರೇಪಿಸಿ ಈ ದಾಳಿ ನಡೆಸಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಸರಿಯಾದ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 1:35 pm, Thu, 7 May 26