ಚಿತ್ರದುರ್ಗ, ಮೇ 8: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ. ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರ ಬ್ಯಾನರ್ಗಳು ರಾರಾಜಿಸುತ್ತಿವೆ. ಇಂದು (ಮೇ 7) ಸಂಜೆ ನಗರದ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೆ ತೆರೆದ ವಾಹನದಲ್ಲಿ ಯಡಿಯೂರಪ್ಪ ಅವರ ಮೆರವಣಿಗೆ ನಡೆಯಲಿದ್ದು, ಸಾವಿರಾರು ಮಹಿಳೆಯರು ಕುಂಭಮೇಳದೊಂದಿಗೆ ಬರಮಾಡಿಕೊಳ್ಳಲಿದ್ದಾರೆ.
ನಾಳೆ (ಮೇ 8) ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅವರಿಗಾಗಿ ವೇದಿಕೆಯ ಹಿಂಭಾಗದಲ್ಲೇ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಮಠಾಧೀಶರು, ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ವೇದಿಕೆಯಲ್ಲಿ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಲಕ್ಷಾಂತರ ಜನರಿಗಾಗಿ ಕುಡಿಯುವ ನೀರು, ಬಾಳೆಹಣ್ಣು ಮತ್ತು ಉಪಾಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
